ಬೆಂಗಳೂರು : ಪವಿತ್ರ ಗೌಡಗೆ ಮೆಸೇಜ್ ಮಾಡಿರುವ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಜೂನ್ 9ರಂದು ನಟ ದರ್ಶನ ಆರ್ ಆರ್ ನಗರದ ಪಟ್ಟಣಗೆರೆ ಷಡ್ ಗೆ ಎಂಟ್ರಿ ಆಗಿರುವ ದೃಶ್ಯ ಇದೀಗ ವೈರಲ್ ಆಗಿದೆ.
ಹೌದು ಜೂನ್ 9ರಂದು ಷಡ್ ಗೆ ಎಂಟ್ರಿಯಾಗಿರುವ ದರ್ಶನ್ ದರ್ಶನ್ ಶೆಡ್ಗೆ ಎಂಟ್ರಿ ಆಗಿರುವ ದೃಶ್ಯ ಇದೀಗ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೌದು ದರ್ಶನ್ ಶೆಡ್ಡಿಗೆ ಎಂಟ್ರಿ ಆಗಿರುವ ದೃಶ್ಯ ಆರ್ ಆರ್ ನಗರ ಪಟ್ಟಣಗೆರೆಯ ಒಂದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ತಿಳಿದು ಬಂದಿದೆ. ಮೊದಲು ಸ್ಕಾರ್ಪಿಯೋದಲ್ಲಿ ವಿನಯ್ ಶಡ್ಡಿಗೆ ಎಂಟ್ರಿ ಕೊಟ್ಟಿದ್ದಾನೆ. ಸ್ಕಾರ್ಪಿಯೋ ಬೆನ್ನಲ್ಲೇ ನಟ ದರ್ಶನ್ ಅವರು ಥಾರ್ ಕಾರಲ್ಲಿ ಮಧ್ಯರಾತ್ರಿ 3.30ಕ್ಕೆ ಎಂಟ್ರಿ ಕೊಟ್ಟಿದ್ದಾರೆ.