ಬೆಂಗಳೂರು: ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಐಜಿಪಿ ಓಂ ಪ್ರಕಾಶ್ ಅವರ ಪುತ್ರ ಇದೀಗ ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಾಯಿ ಹಾಗೂ ತಂಗಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಓಂ ಪ್ರಕಾಶ್ ಪುತ್ರ ಕಾರ್ತಿಕೇಶ್ ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಾಯಿ ಪಲ್ಲವಿ ಎ1 ಹಾಗೂ ತಂಗಿ ಕೃತಿ ಎ2 ಎಂದು ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.
ಕರ್ನಾಟಕದ ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದಂತ ಪ್ರಕರಣದಲ್ಲಿ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿಯನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿರೋದಾಗಿ ತಿಳಿದು ಬಂದಿದೆ.
ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಹತ್ಯೆ ಸಂಬಂಧ ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಓಂ ಪ್ರಕಾಶ್ ಅವರ ನಿವಾಸದಲ್ಲಿ ಪತ್ನಿ ಪಲ್ಲವಿ ಓಂ ಪ್ರಕಾಶ್ ಹತ್ಯೆ ಮಾಡಿದ್ದರು. ಓಂ ಪ್ರಕಾಶ್ ಅವರನ್ನು 8 ರಿಂದ 10 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿದ್ದರು.
ಮಡಿವಾಳ ಎಸಿಪಿ ವಾಸುದೇವ್ ಹೆಗಲಿಗೆ ತನಿಖೆಯ ಹೊಣೆ ವಹಿಸಲಾಗಿದೆ. ಓಂ ಪ್ರಕಾಶ್ ಪದ್ಮಿನಿ ಮತ್ತು ಪುತ್ರಿ ಕೃತಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ವಿಚಾರಣೆಯ ನಂತರ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಓಂ ಪ್ರಕಾಶ್, ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಸಂಜೆ ವೇಳೆಗೆ ಪತ್ನಿ ಮತ್ತು ಪುತ್ರಿಯನ್ನು ಕೋರ್ಟ್ಗೆ ಹಾಜರುಪಡಿಸಲಾಗುವುದು. ಆಸ್ತಿ ವಿಚಾರಕ್ಕೆ ಪತ್ನಿ ಕೊಲೆ ಮಾಡಿರುವ ಶಂಕೆ ಇದೆ.