ಬೆಂಗಳೂರು : ಬೆದರಿಕೆ ಕರೆ ಬೆನ್ನಲ್ಲೇ ಸಚಿವ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯ ಸರ್ಕಾರ ಸಚಿವರಿಗೆ ಹೆಚ್ಚಿನ ಭದ್ರತೆ ಒದಿಗಿಸಿದ್ದು, ಎಸ್ಕಾರ್ಟ್ ಸಿಬ್ಬಂದಿಯನ್ನು ನೀಡಿದೆ.
ಹೌದು, ಬೆದರಿಕೆ ಕರೆ ಹಿನ್ನಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ತಮಗೆ ಭದ್ರತೆ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದೀಗ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಸಚಿವರಿಗೆ ಬೆಂಗಾವಲು ವಾಹನ ನೀಡಿ, ಭದ್ರತೆಯನ್ನು ಇನ್ನಷ್ಟು ಹೆಚ್ಚಳ ಮಾಡಲಾಗಿದೆ.
ಬೆದರಿಕೆ ಕರೆ ಹಿನ್ನೆಲೆಯಲ್ಲಿ ಈಗಾಗಲೇ ಸಚಿವ ಪ್ರಿಯಾಂಕ್ ಖರ್ಗೆ ನಿವಾಸ ಹಾಗೂ ಸಚಿವರಿಗೆ ಭದ್ರತಾ ಸಿಬ್ಬಂದಿಗಳನ್ನು ಹೆಚ್ಚಿಸಲಾಗಿತ್ತು. ಇದೀಗ ಸಚಿವರಿಗೆ ಎಸ್ಕಾರ್ಟ್ ಸಿಬಂದಿಯನ್ನು ಗೃಹ ಇಲಾಖೆ ನೀಡಿದೆ.