ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದ್ದು, ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಅಮೃತ ಹಳ್ಳಿಯ ಠಾಣೆ ಪೊಲೀಸರು ಮಂಜುನಾಥ್ ಎಂಬ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಸೆಪ್ಟೆಂಬರ್ 7 ರಾತ್ರಿ 11:50 ರಲ್ಲಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಾರು ನಿಲ್ಲಿಸಿ ಯುವತಿ ಶ್ವಾನದ ರಕ್ಷಣೆಗೆ ಮುಂದಾಗಿದ್ದಾಳೆ. ಈ ವೇಳೆ ಬೈಕ್ ನಲ್ಲಿ ಬಂದು ಆರೋಪಿ bad ಟಚ್ ಮಾಡಿ ತೆರಳಿದ್ದ. ಈ ವೇಳೆ ಕೈಗೆ ರಕ್ತ ಆಗಿದ್ದರಿಂದ ಯುವತಿ ಪೆಟ್ರೋಲ್ ಬಂಕ್ ಬಳಿ ಕೈ ತೊಳೆದುಕೊಳ್ಳುತ್ತಿದ್ದಳು. ಸ್ವಲ್ಪ ಹೊತ್ತಿನ ಬಳಿಕ ಮತ್ತೆ ಬಂದು ಯುವತಿಯ ಖಾಸಗಿ ಅಂಗ ಮುಟ್ಟಿ ಪರಾರಿಯಾಗಿದ್ದಾನೆ. ಘಟನೆ ಬಗ್ಗೆ ಅಮೃತಹಳ್ಳಿ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾಳೆ. ಸದ್ಯ ಆರೋಪಿ ಮಂಜುನಾಥನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.