ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಪ್ರೀತಿಗೆ ಮನೆಯವರು ಒಪ್ಪದ ಹಿನ್ನೆಲೆಯಲ್ಲಿ ಮನನೊಂದ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪು ಜಿಲ್ಲೆಯ ಶಿಢ್ಲಘಟ್ಟ ತಾಲೂಕಿನ ಚಿಕ್ಕದಾಸನೇಹಳ್ಳಿಯ ಮಾವಿನ ತೋಪಿನಲ್ಲಿ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮೃತರ ಪ್ರೇಮಿಗಳನ್ನು ವಂದನಾ ಹಾಗೂ ನವೀನ್ ಎಂದು ಗುರುತಿಸಲಾಗಿದ್ದು, ವಂದನಾ ಎಸ್ ಎಸ್ ಎಲ್ ಸಿ ಓದುತ್ತಿದ್ದು, ನವೀನ್ ಚಾಲಕನಾಗಿದ್ದು, ಇವರು ಚಿಂತಾಮಣಿ ತಾಲೂಕಿನ ನಿವಾಸಿಗಳಾಗಿದ್ದು, ಮನೆಯವರು ಪ್ರೀತಿಗೆ ಒಪ್ಪದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿಡ್ಲಘಟ್ಟ ಗ್ರಾಮಾಂತರ ಪೊಳಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.