ಯಾದಗಿರಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆಡಿದ್ದು, ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಪಾಪಿ ತಂದೆಯೊಬ್ಬ ಕೊಂದಿದ್ದಾನೆ. ಯಾದಗಿರಿ ತಾಲೂಕಿನ ದುಬನ್ನೂರು ಕ್ಯಾಂಪ್ನಲ್ಲಿ ಈ ಒಂದು ಘಟನೆ ನಡೆದಿದೆ. ಮೂವರ ಮಕ್ಕಳ ಪೈಕಿ ಇಬ್ಬರನ್ನು ತಂದೆ ಶರಣಪ್ಪ ಕೊಂದಿದ್ದಾನೆ. ಭಾರ್ಗವ್ (5) ಹಾಗೂ ಸಾನ್ವಿ (2) ಕೊಲೆಯಾದ ಮಕ್ಕಳು ಎಂದು ತಿಳಿದುಬಂದಿದೆ.
ಇನ್ನು ಹಿರಿಯ ಮಗ ಹೇಮಂತ್ ಕೊಲೆಗೂ ಶರಣಪ್ಪ ಯತ್ನಿಸಿದ್ದ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಹಿರಿಯ ಮಗನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿ ಶರಣಪ್ಪನ ಬಂಧನಕ್ಕೆ ಪೊಲೀಸರು ಬಲೇ ಬೀಸಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.