Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪ್ರತಿ ಸಿಖ್ ಕುಟುಂಬಕ್ಕೂ ನಾಲ್ಕು ಮಕ್ಕಳಿರಲಿ’: ಸಿಎಂಗೆ ನಗದು ಪ್ರೋತ್ಸಾಹಧನ ಕೋರಿ ಪಂಜಾಬ್ ಬಿಜೆಪಿ ನಾಯಕನ ಪತ್ರ

BREAKING : ಸಿದ್ದರಾಮಯ್ಯ ಬದಲಾವಣೆ ಆದರೆ ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ : ಕೆ.ಎನ್ ರಾಜಣ್ಣ ಸ್ಪೋಟಕ ಹೇಳಿಕೆ!

BREAKING : ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯ ಹೊಡೆದಾಟ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿದ್ದರಾಮಯ್ಯ ಬದಲಾವಣೆ ಆದರೆ ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ : ಕೆ.ಎನ್ ರಾಜಣ್ಣ ಸ್ಪೋಟಕ ಹೇಳಿಕೆ!
KARNATAKA

BREAKING : ಸಿದ್ದರಾಮಯ್ಯ ಬದಲಾವಣೆ ಆದರೆ ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ : ಕೆ.ಎನ್ ರಾಜಣ್ಣ ಸ್ಪೋಟಕ ಹೇಳಿಕೆ!

By ಸುರೇಶ್‌

ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಈಗಾಗಲೇ ತೆರೆಮರೆಯಲ್ಲಿ ಹಲವು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಮಧುಗಿರಿ ಶಾಸಕ ಹಾಗೂ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ನೀಡಿರುವ ಜಿ. ಪರಮೇಶ್ವರ್ ಪರವಾದ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ ಸ್ಥಾನ ಯಾರೊಬ್ಬರ ಸ್ವತ್ತಲ್ಲ ಎಂದು ಹೇಳುವ ಮೂಲಕ ರಾಜಣ್ಣ ಅವರು ಹೈಕಮಾಂಡ್ ಮಟ್ಟದಲ್ಲಿ ಹೊಸ ಚರ್ಚೆಗೆ ಮುನ್ನುಡಿ ಬರೆದಿದ್ದಾರೆ.

ತುಮಕೂರಿನ ಮಧುಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಎನ್. ರಾಜಣ್ಣ, ಗೃಹ ಸಚಿವ ಜಿ. ಪರಮೇಶ್ವರ್ ಅವರ ಪರವಾಗಿ ಬಹಿರಂಗವಾಗಿಯೇ ಬ್ಯಾಟಿಂಗ್ ಮಾಡಿದರು. ರಾಜ್ಯದಲ್ಲಿ ಒಂದು ವೇಳೆ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆಯ ಸನ್ನಿವೇಶ ಎದುರಾದರೆ, ಆ ಸ್ಥಾನಕ್ಕೆ ಜಿ. ಪರಮೇಶ್ವರ್ ಅವರೇ ಸೂಕ್ತ ವ್ಯಕ್ತಿ ಮತ್ತು ಅವರೇ ಮುಖ್ಯಮಂತ್ರಿಯಾಗಬೇಕು ಎಂದು ತನು-ಮನ-ಧನದಿಂದ ಬೆಂಬಲಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡಲು ಸಾಧನಾ ಸಮಾವೇಶ ಆಯೋಜಿಸಲಾಗುತ್ತಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ನೇರವಾಗಿಯೇ ಉತ್ತರಿಸಿದ ರಾಜಣ್ಣ, “ಹೌದು, ನಾವು ಅದನ್ನೇ ಬಯಸುತ್ತೇವೆ” ಎಂದು ಒಪ್ಪಿಕೊಂಡರು. ಈ ಮೂಲಕ ಪರಮೇಶ್ವರ್ ಅವರನ್ನು ಮುಂದಿನ ಸಿಎಂ ರೇಸ್‌ನಲ್ಲಿ ಮುಂಚೂಣಿಗೆ ತರಲು ಒಂದು ಬಣ ಈಗಾಗಲೇ ಸದ್ದಿಲ್ಲದೆ ಸಿದ್ಧತೆ ನಡೆಸುತ್ತಿರುವುದನ್ನು ಅವರು ಪರೋಕ್ಷವಾಗಿ ಖಚಿತಪಡಿಸಿದ್ದಾರೆ.

ಇದೇ ವೇಳೆ ಹಳೆಯ ರಾಜಕೀಯ ವಿದ್ಯಮಾನಗಳನ್ನು ನೆನಪಿಸಿದ ರಾಜಣ್ಣ, “ಕಳೆದ 2013ರ ವಿಧಾನಸಭಾ ಚುನಾವಣೆಯಲ್ಲಿ ಜಿ. ಪರಮೇಶ್ವರ್ ಅವರು ಗೆದ್ದಿದ್ದರೆ, ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡುತ್ತಿದ್ದರಾ?” ಎಂದು ಪ್ರಶ್ನಿಸುವ ಮೂಲಕ ಚರ್ಚೆಯನ್ನು ಮತ್ತಷ್ಟು ಕಾವೇರಿಸಿದರು. ಸಿಎಂ ಸ್ಥಾನ ಎಂಬುದು ಸಿದ್ದರಾಮಯ್ಯ ಅವರ ಮನೆ ಆಸ್ತಿಯಲ್ಲ ಮತ್ತು ಅದು ಯಾವುದೇ ರಾಜಕಾರಣಿಗಳ ಸ್ವಂತ ಆಸ್ತಿಯೂ ಅಲ್ಲ ಎಂದು ಅತ್ಯಂತ ಕಡಾಖಂಡಿತವಾಗಿ ನುಡಿದರು.

ಕೆ.ಎನ್. ರಾಜಣ್ಣ ಅವರ ಈ ಸ್ಫೋಟಕ ಹೇಳಿಕೆಯು ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗೆ ತೀವ್ರ ಸಂಚಲನ ಸೃಷ್ಟಿಸಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಸಿಎಂ ಸ್ಥಾನದ ಪೈಪೋಟಿಯ ಮಧ್ಯೆ, ಈಗ ಮೂರನೇ ಶಕ್ತಿಯಾಗಿ ಜಿ. ಪರಮೇಶ್ವರ್ ಅವರ ಹೆಸರು ಮುಂಚೂಣಿಗೆ ಬಂದಿರುವುದು ರಾಜ್ಯ ರಾಜಕೀಯದಲ್ಲಿ ಮುಂದಿನ ದಿನಗಳಲ್ಲಿ ಯಾವ ರೀತಿಯ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯ ಹೊಡೆದಾಟ!

1 Min Read

BREAKING : ರಾಜ್ಯಾದ್ಯಂತ ಮೇ 28ರಂದು `ಬಕ್ರೀದ್ ಹಬ್ಬ’ ಆಚರಣೆ: ಚಂದ್ರ ದರ್ಶನ ಸಮಿತಿ

1 Min Read

BREAKING : ಬೆಳಗಾವಿಯಲ್ಲಿ 4500 ಕೋಟಿ ವಂಚನೆ ಪ್ರಕರಣ : ಆರೋಪಿ ಶಿವಾನಂದ್ ನೀಲಣ್ಣನವರ್ 10 ದಿನ ‘CID’ ಕಸ್ಟಡಿಗೆ

1 Min Read
Recent News

‘ಪ್ರತಿ ಸಿಖ್ ಕುಟುಂಬಕ್ಕೂ ನಾಲ್ಕು ಮಕ್ಕಳಿರಲಿ’: ಸಿಎಂಗೆ ನಗದು ಪ್ರೋತ್ಸಾಹಧನ ಕೋರಿ ಪಂಜಾಬ್ ಬಿಜೆಪಿ ನಾಯಕನ ಪತ್ರ

BREAKING : ಸಿದ್ದರಾಮಯ್ಯ ಬದಲಾವಣೆ ಆದರೆ ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ : ಕೆ.ಎನ್ ರಾಜಣ್ಣ ಸ್ಪೋಟಕ ಹೇಳಿಕೆ!

BREAKING : ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯ ಹೊಡೆದಾಟ!

BREAKING : ರಾಜ್ಯಾದ್ಯಂತ ಮೇ 28ರಂದು `ಬಕ್ರೀದ್ ಹಬ್ಬ’ ಆಚರಣೆ: ಚಂದ್ರ ದರ್ಶನ ಸಮಿತಿ

State News
KARNATAKA

BREAKING : ಸಿದ್ದರಾಮಯ್ಯ ಬದಲಾವಣೆ ಆದರೆ ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ : ಕೆ.ಎನ್ ರಾಜಣ್ಣ ಸ್ಪೋಟಕ ಹೇಳಿಕೆ!

By ಸುರೇಶ್‌ KARNATAKA 2 Mins Read

ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಈಗಾಗಲೇ ತೆರೆಮರೆಯಲ್ಲಿ ಹಲವು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಮಧುಗಿರಿ…

BREAKING : ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯ ಹೊಡೆದಾಟ!

BREAKING : ರಾಜ್ಯಾದ್ಯಂತ ಮೇ 28ರಂದು `ಬಕ್ರೀದ್ ಹಬ್ಬ’ ಆಚರಣೆ: ಚಂದ್ರ ದರ್ಶನ ಸಮಿತಿ

BREAKING : ಬೆಳಗಾವಿಯಲ್ಲಿ 4500 ಕೋಟಿ ವಂಚನೆ ಪ್ರಕರಣ : ಆರೋಪಿ ಶಿವಾನಂದ್ ನೀಲಣ್ಣನವರ್ 10 ದಿನ ‘CID’ ಕಸ್ಟಡಿಗೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.