ರಾಯಚೂರು : ಹಟ್ಟಿ ಚಿನ್ನದ ಗಣಿಯಲ್ಲಿ ಗಣಿಗಾರಿಕೆ ವೇಳೆ ಮಣ್ಣು ಕುಸಿತವಾಗಿ ಘೋರವಾದ ದುರಂತವೊಂದು ಸಂಭವಿಸಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕನಿಗೆ ಕಾಲು ಕಟ್ ಆಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಈ ಒಂದು ದುರಂತ ನಡೆದಿದೆ.
ಸುಮಾರು 2800 ಅಡಿ ಆಳದಲ್ಲಿ ಗೋಲ್ಡ್ ಮೈನಿಂಗ್ ವೇಳೆ ಈ ಒಂದು ದುರಂತ ಸಂಭವಿಸಿದೆ. ಮೈನಿಂಗ್ ವೇಳೆ ಮಣ್ಣು ಕುಸಿದು ಕಾರ್ಮಿಕ ಶರಣಬಸವ (40) ಸಾವನ್ನಪ್ಪಿದ್ದು, ಲಿಂಗಸೂಗೂರು ತಾಲೂಕಿನ ವೀರಾಪುರ ಗ್ರಾಮದ ನಿವಾಸಿಯಾಗಿದ್ದಾನೆ. ಹಾಗೂ ಮತ್ತೊರ್ವ್ ಕಾರ್ಮಿಕ ನಿರುಪಾದಿ ಗಾಯಗೊಂಡಿದ್ದು, ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿದೆ.