Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸೂಕ್ತ ಚಿಕಿತ್ಸೆ ಕೊಡಿಸಿ: ಪಾಕಿಸ್ತಾನ ಸರ್ಕಾರಕ್ಕೆ ಕ್ರಿಕೆಟಿಗರು ಪತ್ರ

17/02/2026 4:44 PM

AI ಆಧಾರಿತ ನೀರು ನಿರ್ವಹಣೆಯಲ್ಲಿ BWSSB ಜಾಗತಿಕವಾಗಿ ಮಾದರಿ: ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

17/02/2026 4:39 PM

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 10 ಕೋಟಿ ಮೌಲ್ಯದ ಮಾದಕ ಪದಾರ್ಥ ವಶಕ್ಕೆ!

17/02/2026 4:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : 2023ನೇ ಸಾಲಿನ `ಸರ್ವೋತ್ತಮ ಸೇವಾ ಪ್ರಶಸ್ತಿಯ ಹಣ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ
KARNATAKA

BREAKING : 2023ನೇ ಸಾಲಿನ `ಸರ್ವೋತ್ತಮ ಸೇವಾ ಪ್ರಶಸ್ತಿಯ ಹಣ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ

By kannadanewsnow5704/11/2025 11:21 AM

ಬೆಂಗಳೂರು : 2023ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಜಿಲ್ಲಾಧಿಕಾರಿಗಳಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲಿನ ಕ್ರಮ ಸಂಖ್ಯೆ (1)ರ ಆದೇಶದಲ್ಲಿ ಅತ್ಯುನ್ನತ ಸೇವೆಗೈದ / ಸಾಧನೆಗೈದ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಲು ಸರ್ಕಾರವು ತೀರ್ಮಾನಿಸಿದೆ. ಇದರನ್ವಯ ರಾಜ್ಯ, ಇಲಾಖೆ ಮತ್ತು ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ನೀಡಲು ಸರ್ಕಾರವು ತೀರ್ಮಾನಿಸಿ ಆದೇಶಿಸಲಾಗಿತ್ತು. ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಆದೇಶದಲ್ಲಿ ರಾಜ್ಯ ಸರ್ಕಾರದ ರಾಜ್ಯ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಸಂಬಂಧಿಸಿದಂತೆ, ಹಲವಾರು ಮಾರ್ಪಾಡು, ಸೇರ್ಪಡೆಗಳನ್ನು ಅಳವಡಿಸಿಕೊಳ್ಳಲು ಹೊಸ ಮಾರ್ಗಸೂಚಿಗಳನ್ನು ಒಳಗೊಂಡ ಆದೇಶಗಳನ್ನು ಹೊರಡಿಸಲಾಗಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಆದೇಶದಲ್ಲಿ 2022ನೇ ಸಾಲಿನಿಂದ ಅನ್ವಯಿಸುವಂತೆ ಜಿಲ್ಲಾ ಮಟ್ಟದ ಸೇವಾ ಪ್ರಶಸ್ತಿಯ ಮೊತ್ತವನ್ನು ಪ್ರತಿ ಪ್ರಶಸ್ತಿಗೆ ರೂ.25,000/-ಗಳನ್ನು ಪ್ರಶಸ್ತಿ ಮೊತ್ತವಾಗಿ ನೀಡಲು ತೀರ್ಮಾನಿಸಲಾಗಿದೆ.

ಮೇಲೆ ಓದಲಾದ ಕ್ರಮ ಸಂಖ್ಯೆ (4)ರ ಆದೇಶದಲ್ಲಿ 2023ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಏಪ್ರಿಲ್, 21ರಂದು ಆಚರಿಸುವ ಕಾರ್ಯಕ್ರಮವನ್ನು ಜಿಲ್ಲಾಡಳಿತವು ಆಯೋಜಿಸಲು ಅನುವಾಗುವಂತೆ, ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಒಟ್ಟು ಮೊತ್ತ ರೂ.1,00,000/-ಗಳ ಅನುದಾನವನ್ನು ಬಿಡುಗಡೆ ಮಾಡಿ ಆದೇಶಿಸಲಾಗಿದ್ದು, 2023ನೇ ಸಾಲಿಗೆ ಸಂಬಂಧಿಸಿದ ಸರ್ವೋತ್ತಮ ಸೇವಾ ಪ್ರಶಸ್ತಿ ಮೊತ್ತವನ್ನು ತಮ್ಮಲ್ಲಿ ಲಭ್ಯವಿರುವ ಮೊತ್ತದಿಂದ ಭರಿಸುವುದು ಹಾಗೂ ಆಯ್ಕೆ ಸಮಿತಿಯ ನಡೆವಳಿಯೊಂದಿಗೆ ಇತರೆ ವಿವರಗಳನ್ನು ಸರ್ಕಾರಕ್ಕೆ ಸಲ್ಲಿಸಿದಲ್ಲಿ, ಸದರಿ ಮೊತ್ತವನ್ನು ತದನಂತರ ಸರ್ಕಾರದಿಂದ ಹಿಂಬರಿಸಲಾಗುವುದು ಎಂದು ಆದೇಶಿಸಲಾಗಿರುತ್ತದೆ.

2023ನೇ ಸಾಲಿಗೆ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡುವ ಸಂಬಂಧ 22 ಜಿಲ್ಲೆಗಳು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ನಡೆವಳಿಯನ್ನು ಕಳುಹಿಸಿರುತ್ತಾರೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2023ನೇ ಸಾಲಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಮೊತ್ತವನ್ನು ಈ ಕೆಳಕಂಡ 22 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಒಟ್ಟು ರೂ. 54,25,000/-(ಐವತ್ತನಾಲ್ಕು ಲಕ್ಷದ ಇಪ್ಪತ್ತೈದು ಸಾವಿರ ರೂ.ಗಳು ಮಾತ್ರ) ಗಳನ್ನು ಬಿಡುಗಡೆ ಮಾಡಿ ಆದೇಶಿಸಿದೆ.

BREAKING: State government orders release of funds for the 'Sarvottam Seva Award' for the year 2023
Share. Facebook Twitter LinkedIn WhatsApp Email

Related Posts

AI ಆಧಾರಿತ ನೀರು ನಿರ್ವಹಣೆಯಲ್ಲಿ BWSSB ಜಾಗತಿಕವಾಗಿ ಮಾದರಿ: ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

17/02/2026 4:39 PM2 Mins Read

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 10 ಕೋಟಿ ಮೌಲ್ಯದ ಮಾದಕ ಪದಾರ್ಥ ವಶಕ್ಕೆ!

17/02/2026 4:36 PM1 Min Read

ಶಿಕ್ಷಕರನ್ನು ನೇಮಕ ಮಾಡದೇ ಹೇಗೆ ‘SSLC ಪರೀಕ್ಷೆ’ಯಲ್ಲಿ ಉತ್ತಮ ಫಲಿತಾಂಶ ನಿರೀಕ್ಷೆ ಮಾಡ್ತೀರಿ: ಸಭಾಪತಿ ಹೊರಟ್ಟಿ ಪ್ರಶ್ನೆ

17/02/2026 4:27 PM1 Min Read
Recent News

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸೂಕ್ತ ಚಿಕಿತ್ಸೆ ಕೊಡಿಸಿ: ಪಾಕಿಸ್ತಾನ ಸರ್ಕಾರಕ್ಕೆ ಕ್ರಿಕೆಟಿಗರು ಪತ್ರ

17/02/2026 4:44 PM

AI ಆಧಾರಿತ ನೀರು ನಿರ್ವಹಣೆಯಲ್ಲಿ BWSSB ಜಾಗತಿಕವಾಗಿ ಮಾದರಿ: ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

17/02/2026 4:39 PM

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 10 ಕೋಟಿ ಮೌಲ್ಯದ ಮಾದಕ ಪದಾರ್ಥ ವಶಕ್ಕೆ!

17/02/2026 4:36 PM

ಶಿಕ್ಷಕರನ್ನು ನೇಮಕ ಮಾಡದೇ ಹೇಗೆ ‘SSLC ಪರೀಕ್ಷೆ’ಯಲ್ಲಿ ಉತ್ತಮ ಫಲಿತಾಂಶ ನಿರೀಕ್ಷೆ ಮಾಡ್ತೀರಿ: ಸಭಾಪತಿ ಹೊರಟ್ಟಿ ಪ್ರಶ್ನೆ

17/02/2026 4:27 PM
State News
KARNATAKA

AI ಆಧಾರಿತ ನೀರು ನಿರ್ವಹಣೆಯಲ್ಲಿ BWSSB ಜಾಗತಿಕವಾಗಿ ಮಾದರಿ: ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

By kannadanewsnow0917/02/2026 4:39 PM KARNATAKA 2 Mins Read

ನವದೆಹಲಿ: ನಗರದ ನೀರು ನಿರ್ವಹಣೆಯಲ್ಲಿ ಕೃತಕ ಬುದ್ಧಿಮತ್ತೆಯ (Artificial Intelligence – AI) ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಬೆಂಗಳೂರು ಜಲಮಂಡಳಿಯು…

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 10 ಕೋಟಿ ಮೌಲ್ಯದ ಮಾದಕ ಪದಾರ್ಥ ವಶಕ್ಕೆ!

17/02/2026 4:36 PM

ಶಿಕ್ಷಕರನ್ನು ನೇಮಕ ಮಾಡದೇ ಹೇಗೆ ‘SSLC ಪರೀಕ್ಷೆ’ಯಲ್ಲಿ ಉತ್ತಮ ಫಲಿತಾಂಶ ನಿರೀಕ್ಷೆ ಮಾಡ್ತೀರಿ: ಸಭಾಪತಿ ಹೊರಟ್ಟಿ ಪ್ರಶ್ನೆ

17/02/2026 4:27 PM

ರಾಜ್ಯದಲ್ಲಿ 29 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಭರ್ತಿಗೆ ಸಭೆ ಕರೆಯುತ್ತೇವೆ : ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿಕೆ

17/02/2026 4:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.