ಬೆಂಗಳೂರು : ಆರ್ ಎಸ್ ಎಸ್ ಬಜರಂಗದಳದ ವಿರುದ್ಧ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 42ನೇ ACJM ಕೋರ್ಟ್ ನಲ್ಲಿ ವಕೀಲ ಅರುಣ್ ಎಂಬುವವರು ಸಲ್ಲಿಸಿದ ಖಾಸಗಿ ದೂರು ವಿಚಾರಣೆ ನಡೆಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕೇಸ್ ಸ್ವೀಕರಿಸುವ ಮುನ್ನ ಸಿದ್ದರಾಮಯ್ಯ ವಾದ ಆಲಿಸಲು ಅವಕಾಶ ಕಲ್ಪಿಸಲಾಗಿದ್ದು, BNS ಸೆಕ್ಷನ್ 253 ಅಡಿ ಕೋರ್ಟ್ ಇದೀಗ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ. ಅತಿ ಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್ ಎಸ್ ಎಸ್ ಮತ್ತು ಬಜರಂಗದಳದಿಂದ ಎಂದು ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಈ ಹೇಳಿಕೆಯನ್ನು ಖಂಡಿಸಿ, ಜನರ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಅಡಿ ವಕೀಲ ಕಿರಣ್ ಎಂಬುವವರು ಕೇಸ್ ದಾಖಲಿಸಿದ್ದರು. ಜೂನ್ 26ರ ಒಳಗಾಗಿ ನೋಟಿಸ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಬೇಕಾಗಿದೆ.