ಮಂಗಳೂರು : ಕಳೆದ ತಿಂಗಳು ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ 15ಕ್ಕೂ ಹೆಚ್ಚು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದ್ದು, ಅಲ್ಲದೆ ರಾಷ್ಟ್ರೀಯ ತನಿಖಾ ದಳ (NIA) ಕೂಡ ತನಿಖೆಯನ್ನು ಚುರುಕುಗೊಳಿಸಿದೆ.
ಇದೀಗ ಸುಹಾಸ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಹತ್ಯೆಯಲ್ಲಿ ಭಾಗಿಯಾದ ಬಹುತೇಕರಿಗೆ PFI ನಂಟು ಇದೆ. ಬಹುತೇಕರಿಗೆ ನಿಷೇಧಿತ PFI ನಂಟು ಇದೆ ಎಂದು ಸಾಕ್ಷಿ ಕೂಡ ಲಭ್ಯವಾಗಿದೆ. ಬಂಧಿತರ ಬ್ಯಾಂಕ್ ಖಾತೆಗಳಿಗೆ ವಿದೇಶಿ ಫಂಡಿಂಗ್ ಬರುತ್ತಿತ್ತು. 12 ಆರೋಪಿಗಳ ಬ್ಯಾಂಕ್ ಖಾತೆಯ ವಿವರವನ್ನು NIA ತಂಡ ಸಂಗ್ರಹಿಸಿದೆ. ಎನ್ಐಎ ಡಿಐಜಿ ರಾಹುಲ್, ಎಸ್ಪಿ ಶಿವಕುಮಾರ್ ಡಿವೈಎಸ್.ಪಿ ಪವನ್ ಕುಮಾರ್ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ.