Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `CBSE’ ಪೋರ್ಟಲ್ ಮೇಲೆ ಸೈಬರ್ ದಾಳಿ : ದೆಹಲಿ ಪೊಲೀಸ್ ಠಾಣೆಯಲ್ಲಿ `FIR’ ದಾಖಲು.!

BREAKING : ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ!

ನಿಮ್ಮ ಮೊಬೈಲ್ ನಲ್ಲಿ ಇಂಟರ್ನೆಟ್ ಸ್ಲೋ ಇದೆಯಾ? ವೇಗವನ್ನು ಹೆಚ್ಚಿಸಲು ಇಲ್ಲಿದೆ ಸುಲಭ ಸಲಹೆಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ!
KARNATAKA

BREAKING : ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ!

By ಸುರೇಶ್‌

ಬೆಂಗಳೂರು : ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದ್ದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ಮನವೊಲಿಕೆ ಕಸರತ್ತು ತೀವ್ರಗೊಂಡಿದೆ. ನಿನ್ನೆ ದಿಢೀರನೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರ ನಡೆ ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳವಣಿಗೆಗಳು ವೇಗವಾಗಿ ಬದಲಾಗುತ್ತಿದ್ದು, ಅಸಮಾಧಾನಿತ ನಾಯಕನನ್ನು ಸಮಾಧಾನಪಡಿಸಲು ಪಕ್ಷದ ವರಿಷ್ಠರು ಮುಂದಾಗಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇಂದು ರಾಮಲಿಂಗಾರೆಡ್ಡಿ ಅವರನ್ನು ಖುದ್ದಾಗಿ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಹಿರಿಯ ನಾಯಕರಾಗಿರುವ ರೆಡ್ಡಿ ಅವರ ರಾಜೀನಾಮೆಯಿಂದ ಪಕ್ಷಕ್ಕಾಗುವ ಮುಜುಗರ ಹಾಗೂ ಹಾನಿಯನ್ನು ತಪ್ಪಿಸಲು ಸುರ್ಜೆವಾಲಾ ಹರಸಾಹಸ ಪಟ್ಟಿದ್ದಾರೆ. ರೆಡ್ಡಿ ಅವರ ಅಸಮಾಧಾನಕ್ಕೆ ಕಾರಣವಾದ ಅಂಶಗಳನ್ನು ಆಲಿಸಿದ ಅವರು, ಹೈಕಮಾಂಡ್ ಮಟ್ಟದಲ್ಲಿ ಮಾತನಾಡಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಈ ಭೇಟಿಯ ವೇಳೆ ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆ ನಿರ್ಧಾರದ ಹಿಂದಿನ ಅಸಮಾಧಾನವನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ. “ಬೆಂಗಳೂರು ಅಭಿವೃದ್ಧಿ ಖಾತೆಯನ್ನು ನೀಡುವುದಿಲ್ಲ ಎಂದಿದ್ದರೆ ಮೊದಲೇ ಸ್ಪಷ್ಟವಾಗಿ ಹೇಳಬೇಕಿತ್ತು. ಆದರೆ, ಮೊದಲು ಮಾತು ಕೊಟ್ಟು ಆ ನಂತರ ಬೇರೆ ಖಾತೆ ನೀಡುವುದು ಸರಿಯಲ್ಲ. ಮೊದಲೇ ಬೆಂಗಳೂರು ಅಭಿವೃದ್ಧಿ ಖಾತೆ ಸಿಗುವುದಿಲ್ಲ ಎಂದು ಗೊತ್ತಿದ್ದರೆ ನಾನು ಸಚಿವ ಸ್ಥಾನವನ್ನೇ ಸ್ವೀಕರಿಸುತ್ತಿರಲಿಲ್ಲ” ಎಂದು ಸುರ್ಜೆವಾಲಾ ಎದುರು ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬೆಂಗಳೂರು ನಗರದ ರಾಜಕಾರಣದಲ್ಲಿ ಸುದೀರ್ಘ ಅನುಭವ ಹೊಂದಿರುವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ಅಭಿವೃದ್ಧಿ ಖಾತೆಯ ಮೇಲೆ ಹೆಚ್ಚಿನ ಆಸಕ್ತಿಯಿತ್ತು. ಆದರೆ ಖಾತೆ ಹಂಚಿಕೆಯಲ್ಲಿ ತಮಗೆ ಅನ್ಯಾಯವಾಗಿದೆ ಮತ್ತು ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಕೊಟ್ಟ ಮಾತನ್ನು ತಪ್ಪಿದ್ದಾರೆ ಎಂಬುದು ಅವರ ತೀವ್ರ ಅಸಮಾಧಾನಕ್ಕೆ ಮುಖ್ಯ ಕಾರಣವಾಗಿದೆ. ಇದೇ ಬೇಸರದಿಂದ ಅವರು ನಿನ್ನೆ ರಾಜೀನಾಮೆ ಅಸ್ತ್ರ ಪ್ರಯೋಗಿಸಿದ್ದರು.

ಆದರೆ, ಇಂದು ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಡೆಸಿದ ಸಂಧಾನ ಸಭೆಯು ಬಹುತೇಕ ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ. ಸುರ್ಜೆವಾಲಾ ಅವರ ಮನವೊಲಿಕೆ ಮತ್ತು ನೀಡಿದ ಭರವಸೆಗಳಿಗೆ ರಾಮಲಿಂಗಾರೆಡ್ಡಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಚಿವರು ತಮ್ಮ ಪಟ್ಟು ಸಡಿಲಿಸಿದ್ದು, ಇಂದು ಸಂಜೆಯ ವೇಳೆಗೆ ತಮ್ಮ ರಾಜೀನಾಮೆಯನ್ನು ಅಧಿಕೃತವಾಗಿ ವಾಪಸ್ ಪಡೆಯುವ ಸಾಧ್ಯತೆಗಳು ದಟ್ಟವಾಗಿವೆ. ಭಿನ್ನಮತ ಶಮನಗೊಂಡರೆ ಕಾಂಗ್ರೆಸ್ ನಾಯಕರು ನಿಟ್ಟುಸಿರು ಬಿಡಲಿದ್ದಾರೆ.

Share. Facebook Twitter LinkedIn WhatsApp Email

Related Posts

ನಿಮ್ಮ ಮೊಬೈಲ್ ನಲ್ಲಿ ಇಂಟರ್ನೆಟ್ ಸ್ಲೋ ಇದೆಯಾ? ವೇಗವನ್ನು ಹೆಚ್ಚಿಸಲು ಇಲ್ಲಿದೆ ಸುಲಭ ಸಲಹೆಗಳು!

1 Min Read

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಿಢೀರ್ ಪೋಲೀಸರ ದಾಳಿ : ಮೊಬೈಲ್, ಸಿಮ್ ಕಾರ್ಡ್ ವಶಕ್ಕೆ!

1 Min Read

BREAKING : ಬೆಂಗಳೂರಲ್ಲಿ ಘೋರಕೃತ್ಯ : ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳ ಬರ್ಬರ ಹತ್ಯೆಗೈದ ತಾಯಿ!

1 Min Read
Recent News

BREAKING : `CBSE’ ಪೋರ್ಟಲ್ ಮೇಲೆ ಸೈಬರ್ ದಾಳಿ : ದೆಹಲಿ ಪೊಲೀಸ್ ಠಾಣೆಯಲ್ಲಿ `FIR’ ದಾಖಲು.!

BREAKING : ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ!

ನಿಮ್ಮ ಮೊಬೈಲ್ ನಲ್ಲಿ ಇಂಟರ್ನೆಟ್ ಸ್ಲೋ ಇದೆಯಾ? ವೇಗವನ್ನು ಹೆಚ್ಚಿಸಲು ಇಲ್ಲಿದೆ ಸುಲಭ ಸಲಹೆಗಳು!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಿಢೀರ್ ಪೋಲೀಸರ ದಾಳಿ : ಮೊಬೈಲ್, ಸಿಮ್ ಕಾರ್ಡ್ ವಶಕ್ಕೆ!

State News
KARNATAKA

BREAKING : ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ!

By ಸುರೇಶ್‌ KARNATAKA 2 Mins Read

ಬೆಂಗಳೂರು : ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದ್ದ ಹಿರಿಯ…

ನಿಮ್ಮ ಮೊಬೈಲ್ ನಲ್ಲಿ ಇಂಟರ್ನೆಟ್ ಸ್ಲೋ ಇದೆಯಾ? ವೇಗವನ್ನು ಹೆಚ್ಚಿಸಲು ಇಲ್ಲಿದೆ ಸುಲಭ ಸಲಹೆಗಳು!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಿಢೀರ್ ಪೋಲೀಸರ ದಾಳಿ : ಮೊಬೈಲ್, ಸಿಮ್ ಕಾರ್ಡ್ ವಶಕ್ಕೆ!

BREAKING : ಬೆಂಗಳೂರಲ್ಲಿ ಘೋರಕೃತ್ಯ : ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳ ಬರ್ಬರ ಹತ್ಯೆಗೈದ ತಾಯಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.