ಪಶ್ಚಿಮಬಂಗಾಳ : ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿ ಸರ್ಕಾರದ ಪ್ರಮಾಣವಚನ ಸಮಾರಂಭವು ಇಂದು ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆಯಿತು. ಪಶ್ಚಿಮಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೆಂಧು ಅಧಿಕಾರಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್, ರಾಜನಾಥ್ ಸಿಂಗ್, ಜೆಪಿ ನಡ್ಡಾ, ನಿತೀನ್ ಗಡ್ಕರಿ, ಧರ್ಮೇಂದ್ರ ಪ್ರಧಾನ್, ಶಿವರಾಜ್ ಸಿಂಗ್, ಸುರೇಶ್ ಗೋಪಿ, ಸಿಎಂಗಳಾದ ಯೋಗಿ ಆದಿತ್ಯನಾಥ, ಚಂದ್ರಬಾಬು ನಾಯ್ಡು ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.
ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಅಧಿಕಾರಾವಧಿಯನ್ನು ಔಪಚಾರಿಕವಾಗಿ ಕೊನೆಗೊಳಿಸಿದ ರಾಜ್ಯಪಾಲ ರವಿ ಗುರುವಾರ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿದ್ದರು. ಇದು ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ 207 ಸ್ಥಾನಗಳನ್ನು ಗಳಿಸಿ ಬಹುಮತ ಪಡೆದಿದ್ದ ಬಿಜೆಪಿಗೆ ರಾಜ್ಯದಲ್ಲಿ ಮೊದಲ ಬಾರಿ ಸರ್ಕಾರ ರಚಿಸಲು ದಾರಿ ಮಾಡಿಕೊಟ್ಟಿತು.
ಇನ್ನೂ ನಿನ್ನೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಮಾತನಾಡಿದ ಸುವೇಂದು ಅಧಿಕಾರಿ, “ರಾಜ್ಯದಲ್ಲಿ ಇದುವರೆಗೆ ಇದ್ದ ಭಯದ ವಾತಾವರಣ ಈಗ ದೂರವಾಗಿದೆ” ಎಂದು ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಪ್ರಧಾನಿ ಮೋದಿ ಅವರು ಭರವಸೆ ನೀಡಿದಂತೆ ಜನರ ವಿಶ್ವಾಸವನ್ನು ಪುನಃಸ್ಥಾಪಿಸಲಾಗಿದೆ ಮತ್ತು ಹೊಸ ಸರ್ಕಾರವು ಕೇಂದ್ರದೊಂದಿಗೆ ನಿಕಟವಾಗಿ ಕೆಲಸ ಮಾಡಿ ಬಂಗಾಳದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದೆ ಎಂದು ತಿಳಿಸಿದರು. ಜೊತೆಗೆ ಜನರ ನಿರೀಕ್ಷೆಗಳನ್ನು ಈಡೇರಿಸುವುದು ಮತ್ತು ಪಾರದರ್ಶಕ ಆಡಳಿತ ನೀಡುವುದು ತಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಘೋಷಿಸಿದ್ದಾರೆ.
ಇನ್ನೂ, ರಾಜ್ಯದಲ್ಲಿ ಸಮತೋಲಿತ ಆಡಳಿತ ನೀಡಲು ಬಿಜೆಪಿ ಈ ಬಾರಿ ಮಹತ್ವದ ಹೆಜ್ಜೆ ಇಟ್ಟಿದೆ. ಅದುವೇ, ಸುವೇಂದು ಅಧಿಕಾರಿ ಅವರೊಂದಿಗೆ ಅಗ್ನಿಮಿತ್ರಾ ಪಾಲ್ ಮತ್ತು ಶಂಕರ್ ಘೋಷ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದೆ. ಈ ಮೂಲಕ ಮಹಿಳಾ ಸಬಲೀಕರಣ ಮತ್ತು ಉತ್ತರ ಬಂಗಾಳದ ಅಭಿವೃದ್ಧಿಗೆ ಆದ್ಯತೆ ನೀಡುವ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.
#WATCH Kolkata | BJP leader Suvendu Adhikari takes oath as the first BJP Chief Minister of West Bengal since independence pic.twitter.com/tTMotWpIld
— ANI (@ANI) May 9, 2026






