ಬೆಂಗಳುರು : ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಸಿಎಂ ಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಟ್ಟುಕೊಡಬೇಕು ಎಂದು ಚಂದ್ರಶೇಖರ ಶ್ರೀ ಸ್ವಾಮೀಜಿ ವೇದಿಕೆಯಲ್ಲೇ ಮನವಿ ಮಾಡಿದ್ದಾರೆ.
ಇಂದು ಕೆಂಪೇಗೌಡ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಎದುರೇ ಮಾತನಾಡಿದ ಚಂದ್ರಶೇಖರ ಶ್ರೀ ಸ್ವಾಮೀಜಿ ಅವರು, ನಿಮಗೆ ಅನುಭವವಿದೆ. ಹೀಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯಗೆ ಮತ್ತೊಮ್ಮೆ ಮನವಿ ಮಾಡುತ್ತಾ ದಯವಿಟ್ಟು ತಮ್ಮ ತಮ್ಮ ಅಧಿಕಾರವನ್ನು ಅನುಭವಿಸಿದಾರೆ. ನಮ್ಮ ಡಿ.ಕೆ. ಶಿವಕುಮಾರ್ ಒಬ್ಬರು ಮಾತ್ರ ಸಿಎಂ ಆಗಿಲ್ಲ. ನಮ್ಮ ಸಿದ್ದರಾಮಯ್ಯ ಅನುಭವ ಇದ್ದಾರೆ. ಈ ಮುಂದೆ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟುಕೊಟ್ಟು, ಅವರಿಗೆ ಒಳ್ಳೆಯದಾಗಲಿ, ಅವರಿಗೆ ಅನುಗ್ರಹ ಮಾಡಲಿ ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.