ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಸಿಟಿ ಮಾರ್ಕೆಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಆಕಾಶ್ (26) ಮತ್ತು ಮಂಗಳೂರು ಮೂಲದ ಅಫಲ್ (26) ಎಂದು ತಿಳಿದುಬಂದಿದೆ. ಮಣಿ ಮತ್ತು ಕಾಸಿಂ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರಿದಿದೆ. ಮಂಗಳವಾರ ಮುಂಜಾನೆ ಸುಮಾರು 1.30ಕ್ಕೆ ಬಿಜಿಎಸ್ ಮೇಲೇತುವೆಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ಸವಾರರಾದ ಕೆ.ಪಿ.ಅಗ್ರಹಾರ ನಿವಾಸಿ ಆಕಾಶ್ ಡ್ರೈಂಡರ್ ಮೆಕ್ಯಾನಿಕ್ ಕೆಲಸ ಮತ್ತು ವಿಜಯನಗರ ನಿವಾಸಿ ಅಫೂಲ್ ಬಟ್ಟೆ ಅಂಗಡಿಯಲ್ಲಿ ಕೆಲಸಮಾಡುತ್ತಿದ್ದರು. ಆಕಾಶ್ ಮತ್ತು ಮಣಿ ರಾತ್ರಿ ಊಟ ಮಾಡಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆ ಕಡೆಗೆ ಹೊರಟಿದ್ದರು. ಬಿಜಿಎಸ್ ಮೇತುವೆ ಗಣೇಶ ದೇವಸ್ಥಾನದ ಬಳಿ ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ಮುಂದೆ ಅಫೂಲ್ ಮತ್ತು ಕಾಸಿಂ ಹೋಗುತ್ತಿದ್ದ ಎಲೆಕ್ನಿಕ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನಗಳ ಸಮೇತ ನಾಲ್ವರು ಸವಾರರು ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ ಸವಾರ ಆಕಾಶ್ ಮತ್ತು ಅಫೈಲ್ ಗಂಭೀರವಾಗಿ ಗಾಯಗೊಂಡರೆ, ಮಣಿ ಮತ್ತು ಕಾಸಿಂ ಕೈ ಹಾಗೂ ಕಾಲುಗಳಿಗೆ ಪೆಟ್ಟು ಬಿದ್ದಿದೆ. ಬಳಿಕ ಗಾಯಾಳು ಆಕಾಶ್ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಆಕಾಶ್ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮತ್ತೊಬ್ಬ ಗಾಯಾಳು ಅಫೈಲ್ನನ್ನು ಪೀಪಲ್ಸ್ ಟೀ ಆಸ್ಪತ್ರೆಗೆ ಸಾಗಿಸುವಾಗ ಮೃತಟ್ಟಿದ್ದಾರೆ. ಆಕಾಶ್ನ ಸ್ನೇಹಿತ ಮಣಿ ಮತ್ತು ಅಫೈಲ್ನ ಸ್ನೇಹಿತ ಕಾಸಿಂ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.