ಬೆಂಗಳೂರು : ಸೆಪ್ಟೆಂಬರ್ 22ರಂದು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಬೆಂಗಳೂರಿನ ವಿಧಾನಸೌಧದಲ್ಲಿ ದಸರಾ ಪೂರ್ವಭಾವಿ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ಸೆಪ್ಟೆಂಬರ್ 22ರಂದು ಬೆಳಿಗ್ಗೆ 10:10ಕ್ಕೆ ಮೈಸೂರು ದಸರಾ ಉದ್ಘಾಟನೆ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ಮೈಸೂರು ಉತ್ಸವ ನಡೆಯಲಿದೆ. ಅಕ್ಟೋಬರ್ 2ರಂದು ದಸರಾ ಜಂಬೂ ಸವಾರಿ ನಡೆಯಲಿದೆ ಸಂಜೆ 4:42 ರಿಂದ 5:06 ನಡುವೆ ಜಂಬೂ ಸವಾರಿಗೆ ಪುಷ್ಪಾರ್ಚನೆ ಸಲ್ಲಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈ ಬಾರಿ 9 ದಿನದ ಬದಲು 11 ದಿನ ದಸರಾ ಆಚರಣೆಗೆ ನಿರ್ಧರಿಸಿದ್ದೇವೆ. ಅಧಿಕ ಪಂಚಮಿ ಬಂದಿರುವುದರಿಂದ 11 ದಿನಗಳ ಕಾಲ ದಸರಾ ಹಬ್ಬ ಆಚರಣೆ ಮಾಡಲಾಗುತ್ತಿದೆ. ಈ ಹಿಂದೆಯೂ 8 ಬಾರಿ 11 ದಿನ ದಸರಾ ನಡೆದಿದೆ. ರಾಜ್ಯದಲ್ಲಿ ಉತ್ತಮ ಮಳೆಯಿಂದ ರೈತರು ಸಂತಸದಿಂದ ಇದ್ದಾರೆ. ಹಾಗಾಗಿ ವಿಗ್ರಂಬಣೆಯಿಂದ ಮೈಸೂರು ದಸರಾ ಹಬ್ಬ ಆಚರಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ದಸರಾ ವೀಕ್ಷಣೆಗೆ 10 ಲಕ್ಷಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆ ಇದೆ. ಹಾಗಾಗಿ ನೂಕು ನುಗ್ಗುಲು ಆಗದಂತೆ ನೋಡಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಜನಸ್ನೇಹಿಗಳಾಗಿ ಪೊಲೀಸರು ವರ್ಜಿಸಬೇಕು ಎಂದು ಈಗಾಗಲೇ ಸೂಚನೆ ನೀಡಿದ್ದೇನೆ. ವಸ್ತು ಪ್ರದರ್ಶನದ ಮಳಿಗೆ ಆರಂಭದ ದಿನವೇ ತುಂಬಬೇಕು. ಕಳೆದ ಬಾರಿ ಮೈಸೂರು ದಸರಾ ಗೆ 40 ಕೋಟಿ ರೂಪಾಯಿ ಖರ್ಚಾಗಿತ್ತು. ಯಾವುದೇ ಬಿಲ್ ಗಳು ಪೆಂಡಿಂಗ್ ಇಲ್ಲ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.