ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಬುರ್ಕಾ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ.
ಬುರ್ಖಾ ಧರಿಸಿ ಪ್ರಯಾಣಿಕರ ಸೋಗಿನಲ್ಲಿ ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಚಿನ್ನಾಭರಣ-ಹಣ ಕಳ್ಳತನ ಮಾಡುತ್ತಿದ್ದ ಬುರ್ಖಾ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಮೂಲದ ಅನು ಹಾಗೂ ಪದ್ಮಾ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಬಂಧಿತದಿಂದ 16 ಲಕ್ಷ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ.
ಕೆಎಸ್ ಆರ್ ಟಿಸಿ ಬಸ್ ನಲ್ಲಿ ಚಿನ್ನಾಭರಣ ಕಳ್ಳತನವಾಗಿದೆ ಎಂದು ಸಂತ್ರ ಸ್ತೆ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.