ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ಮನೆಯ ಬಳಿಯೇ ಕಳ್ಳನೊಬ್ಬ ಕಂಪೌಂಡ್ ಜಿಗಿದು ಸಂಪ್ ಮುಚ್ಚಳವನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಸಿಎಂ ಸಿದ್ದರಾಮಯ್ಯ ಅವರ ಮನೆಯ ಕೂಗಳತೆ ದೂರದಲ್ಲೇ ಕುಮಾರ ಕೃಪಾ ವೆಸ್ಟ್ನಲ್ಲಿ ಹಾಡಹಗಲೇ ಕಂಪೌಂಡ್ ಜಿಗಿದು ಸಂಪ್ ಮುಚ್ಚಳವನ್ನು ಖದೀಮ ಕಳ್ಳತನ ಮಾಡಿದ್ದಾನೆ.
ಕಳ್ಳತನ ಮಾಡಿದ್ದ ಸಂಪ್ ಮುಚ್ಚಳವನ್ನ ಮನೆಯ ಮರೆಯಲ್ಲಿಟ್ಟಿದ್ದ ಆರೋಪಿ, ಜನರ ಓಡಾಟ ಕಡಿಮೆಯಾದ ನಂತರ ತೆಗೆದುಕೊಂಡು ಪರಾರಿಯಾಗಿದ್ದಾನೆ. ಸದ್ಯ ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.