Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತೈಲ ಅಭಾವವಿಲ್ಲ, ಆದರೆ ದಿನಕ್ಕೆ ₹1,000 ಕೋಟಿ ನಷ್ಟ! ಪೆಟ್ರೋಲ್ ಬೆಲೆ ಸ್ಥಿರವಾಗಿರಲು ಇದೇ ಕಾರಣ: ಕೇಂದ್ರದ ಸ್ಪಷ್ಟನೆ

​’ಆಪರೇಷನ್ ಸಿಂದೂರ್’ ವಾರ್ಷಿಕೋತ್ಸವ: ಪಾಕಿಸ್ತಾನದ ಸುಳ್ಳುಗಳನ್ನು ಬಯಲು ಮಾಡಿದ ಅಮೆರಿಕದ ದಾಖಲೆಗಳು; ಅಸಿಮ್ ಮುನೀರ್‌ಗೆ ಮುಖಭಂಗ!

BIG NEWS: ಮೊದಲ ಪತ್ನಿಯ ಜೀವನಾಂಶ ಕೇಸಿಗೆ ಎರಡನೇ ಪತ್ನಿ ಸಾಕ್ಷಿ ಬೇಕಿಲ್ಲ; ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾಳೆಯಿಂದ ಯಾವುದೇ ಗೊಂದಲ ಇರಲ್ಲ : `CM’ ಕುರ್ಚಿ ಕದನಕ್ಕೆ ವಿರಾಮ ಘೋಷಿಸಿದ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್.!
KARNATAKA

BREAKING : ನಾಳೆಯಿಂದ ಯಾವುದೇ ಗೊಂದಲ ಇರಲ್ಲ : `CM’ ಕುರ್ಚಿ ಕದನಕ್ಕೆ ವಿರಾಮ ಘೋಷಿಸಿದ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್.!

By kannadanewsnow57

ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್  ಮೀಟಿಂಗ್ ಮಾಡಿದ್ದು, ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಡಿ.ಕೆ.ಶಿವಕುಮಾರ್ ಅವರು ಪೊನ್ನಣ್ಣ ನಾವು ಮೂವರು ಬ್ರೇಕ್ ಫಾಸ್ಟ್ ನಲ್ಲಿ ಭಾಗಿಯಾಗಿದ್ದೇವು. ಅಲ್ಲಿ ಏನೂ ಮಾತನಾಡಿಲ್ಲ. ಬ್ರೇಕ್ ಫಾಸ್ಟ್ ಚೆನ್ನಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಇಂದು ನಮ್ಮ ಮನೆಗೆ ಬಂದಿದ್ದರು. ಒಟ್ಟಿಗೆ ಬ್ರೇಕ್ ಫಾಸ್ಟ್ ಒಟ್ಟಿಗೆ ಮಾಡಿದ್ದೇವೆ. ಹೈಕಮಾಂಡ್ ಮೊನ್ನೆ ಪೊನ್ನಣ್ಣರಿಗೆ ಕರೆ ಮಾಡಿದ್ದರು. ಡಿ.ಕೆ.ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಕರೆಯಿರಿ ಎಂದು ಹೇಳಿದ್ದರು.

ಡಿ.ಕೆ. ಶಿವಕುಮಾರ್ ಅವರಿಗೂ ಇದನ್ನು ಹೇಳಿದ್ದರು. ಡಿ.ಕೆ.ಶಿವಕುಮಾರ್ ಅವರು ತಮ್ಮ ಮನೆಗೆ ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಇನ್ನೊಂದಿನ ನಿಮ್ಮ ಮನೆಗೆ ಊಟಕ್ಕೆ ಬರ್ತಿನಿ ಅಂತ ಹೇಳಿದ್ದೇನೆ ಎಂದರು.

ನಾವು ಇಂದು ಮೀಟಿಂಗ್ ಮಾಡಿದ ಉದ್ದೇಶ, ಕೆಲವು ಗೊಂದಲಗಳು ನಿರ್ಮಾಣ ಆಗಿದ್ದೇವೆ. ಒಂದು ತಿಂಗಳಿನಿಂದ ಈ ಗೊಂದಲಗಳು ಶುರುವಾಗಿವೆ. ನಾವು ಇಬ್ಬರು ಮಾತನಾಡಿದ್ದೇವೆ. ನಮ್ಮ ಉದ್ದೇಶ 2028 ರ ಚುನಾವಣೆ, ಸ್ಥಳೀಯ ಸಂಸ್ಥೆ, ತಾಲೂಕು, ಜಿಲ್ಲಾ, ಗ್ರಾಮಪಂಚಾಯಿತಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ.

2023 ರ ವಿಧಾನಸಭೆ ಚುನಾವಣೆ ಹೇಗೆ ನಾವಿಬ್ಬರು ಚರ್ಚೆ ಮಾಡಿದ್ದೇವೆ ಹಾಗೆಯೇ 2028 ರ ವಿಧಾನಸಭೆ ಚುನಾವಣೆಯಲ್ಲೂ ನಾವು ಒಟ್ಟಿಗೆ ಕೆಲಸ ಮಾಡುತ್ತೇವೆ. ಒಟ್ಟಿಗೆ ಹೋಗುತ್ತೇವೆ. ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಇಲ್ಲ. ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಶುರುವಾಗಲಿದೆ. ವಿರೋಧ ಪಕ್ಷದವರನ್ನು ಬಹಳ ಸಮರ್ಥವಾಗಿ ಎದುರಿಸುತ್ತೇವೆ. ಸುಳ್ಳು ಅಪಪ್ರಚಾರಗಳನ್ನು, ಸುಳ್ಳುಗಳನ್ನು, ಸುಳ್ಳು ಆರೋಪಗಳನ್ನು ಮಾಡುವುದು ಬಿಜೆಪಿಯ ಚಾಳಿ, ಹೀಗಾಗಿ ಇವರನ್ನು ಸಮರ್ಥವಾಗಿ ನಾವಿಬ್ಬರು ಎದುರಿಸುತ್ತೇವೆ ಎಂದು ಹೇಳಿದ್ದಾರೆ.

ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ನಾವಿಬ್ಬರು ಕೇಳುತ್ತೇವೆ. ಇದೀಗ ಇರುವ ಗೊಂದಲಗಳನ್ನು ಪರಿಹರಿಸುವಂತೆ ಹೈಕಮಾಂಡ್ ಸೂಚನೆ ನೀಡಿದ್ದಾರೆ. ಹೀಗಾಗಿ ನಾಳೆಯಿಂದ ಯಾವುದೇ ಗೊಂದಲ ಇರಲ್ಲ. ಕೆಲವು ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿಗೆ ಹೋಗಿರಬಹುದು. ಕೆಲವರು ಬಂದು ನನಗೆ ಇದನ್ನು ಹೇಳಿದ್ದಾರೆ ಎಂದರು.

ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದೆ. ರಾಜಕೀಯವಾಗಿ ನಮ್ಮಿಬ್ಬರದು ಒಂದೇ ತೀರ್ಮಾಣ, ನಮ್ಮಲ್ಲಿ ಯಾವ ಗುಂಪುಗಾರಿಕೆ ಇಲ್ಲ. ಹೈಕಮಾಂಡ್ ಹೇಳಿದಂತೆ ನಡೆಯುತ್ತೇವೆ ಎಂದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇಂದು ಉಪಾಹಾರಕ್ಕೆ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಿದ್ದರು. ಈ ವೇಳೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ಕೂಡ ಹಾಜರಿದ್ದರು.

BREAKING: There will be no confusion from tomorrow: Siddaramaiah-D.K. Shivakumar declare a pause in the fight for the CM's chair!
Share. Facebook Twitter LinkedIn WhatsApp Email

Related Posts

ರಾಜ್ಯದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ. 10ರಿಂದ 12.5ರಷ್ಟು ವೇತನ ಹೆಚ್ಚಳಕ್ಕೆ ಅಸ್ತು? Salary Hike

1 Min Read

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಖಾತೆಗೆ ಎರಡು ತಿಂಗಳ `ಗೃಹಲಕ್ಷ್ಮಿ’ ಹಣ ಜಮಾ | Grihalakshmi

1 Min Read

GOOD NEWS : ರಾಜ್ಯ ಸರ್ಕಾರಿ ನೌಕರರಿಗೆ `ತುಟ್ಟಿಭತ್ಯೆ (DA) ಶೇ. 1.5 ರಷ್ಟು ಹೆಚ್ಚಳ : ಸರ್ಕಾರ ಅಧಿಕೃತ ಆದೇಶ | DA Hike

1 Min Read
Recent News

ತೈಲ ಅಭಾವವಿಲ್ಲ, ಆದರೆ ದಿನಕ್ಕೆ ₹1,000 ಕೋಟಿ ನಷ್ಟ! ಪೆಟ್ರೋಲ್ ಬೆಲೆ ಸ್ಥಿರವಾಗಿರಲು ಇದೇ ಕಾರಣ: ಕೇಂದ್ರದ ಸ್ಪಷ್ಟನೆ

​’ಆಪರೇಷನ್ ಸಿಂದೂರ್’ ವಾರ್ಷಿಕೋತ್ಸವ: ಪಾಕಿಸ್ತಾನದ ಸುಳ್ಳುಗಳನ್ನು ಬಯಲು ಮಾಡಿದ ಅಮೆರಿಕದ ದಾಖಲೆಗಳು; ಅಸಿಮ್ ಮುನೀರ್‌ಗೆ ಮುಖಭಂಗ!

BIG NEWS: ಮೊದಲ ಪತ್ನಿಯ ಜೀವನಾಂಶ ಕೇಸಿಗೆ ಎರಡನೇ ಪತ್ನಿ ಸಾಕ್ಷಿ ಬೇಕಿಲ್ಲ; ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

ರಾಜ್ಯದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ. 10ರಿಂದ 12.5ರಷ್ಟು ವೇತನ ಹೆಚ್ಚಳಕ್ಕೆ ಅಸ್ತು? Salary Hike

State News
KARNATAKA

ರಾಜ್ಯದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ. 10ರಿಂದ 12.5ರಷ್ಟು ವೇತನ ಹೆಚ್ಚಳಕ್ಕೆ ಅಸ್ತು? Salary Hike

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರ ದೀರ್ಘಕಾಲದ ಬೇಡಿಕೆಗೆ ಕೊನೆಗೂ ಮನ್ನಣೆ ಸಿಗುವ ಲಕ್ಷಣಗಳು ಕಾಣುತ್ತಿವೆ. ಸಾರಿಗೆ ನೌಕರರ…

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಖಾತೆಗೆ ಎರಡು ತಿಂಗಳ `ಗೃಹಲಕ್ಷ್ಮಿ’ ಹಣ ಜಮಾ | Grihalakshmi

GOOD NEWS : ರಾಜ್ಯ ಸರ್ಕಾರಿ ನೌಕರರಿಗೆ `ತುಟ್ಟಿಭತ್ಯೆ (DA) ಶೇ. 1.5 ರಷ್ಟು ಹೆಚ್ಚಳ : ಸರ್ಕಾರ ಅಧಿಕೃತ ಆದೇಶ | DA Hike

BIG NEWS: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ‘ಭೂದಾಖಲೆ’ಗಳ ನಕಲು ಶುಲ್ಕ ಹೆಚ್ಚಳ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.