ರಾಮನಗರ : ರಾಮನಗರ ಜಿಲ್ಲೆಯ ಬಿಡದಿ ರೈಲ್ವೆ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಾಕ್ ಪರ ಗೋಡೆ ಬಹರ ಬರೆದಿದ್ದ ಹಿನ್ನೆಲೆಯಲ್ಲಿ ರೈಲು ನಿಲ್ದಾಣವನ್ನು ಬಾಂಬ್ ನಿಂದ ಸ್ಪೊಟಿಸುವುದಾಗಿ ದುಷ್ಕರ್ಮಿಗಳು ಕರೆ ಮಾಡಿ ಬೆದರಿಕೆ ಹಾಕಿದ್ದಾರೆ.
ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಡಿಟೆಕ್ಟರ್ ಮೂಲಕ ಬಿಡದಿ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಅಧಿಕಾರಿಗಳು ಹಾಗೂ ರಾಮನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಿಡದಿ ರೈಲು ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಬೆದರಿಕೆಯೊಡ್ದಿದ್ದು, ಈ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯದಳ, ಶ್ವಾನ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ.