ಮಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರವಾಗಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅದರಂತೆ ಮಂಗಳೂರಿನಲ್ಲಿ ಪ್ರತಿಭಟನೆಯ ವೇಳೆ ಖಾಸಗಿ ಬಸ್ಸಿನ ಮೇಲೆ ಕಲ್ಲು ತೂರಾಟ ನಡೆಸಿದ್ದ ಮೂವರು ಕಾಂಗ್ರೆಸ್ ಕಾರ್ಯಕರ್ತರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ಹೌದು ಮಂಗಳೂರಿನ ಬರ್ಕೆ ಠಾಣೆ ಪೋಲಿಸ್ರಿಂದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ನಗರ ಪಾಲಿಕೆಯ ನಾಮ ನಿರ್ದೇಶಿತ ಸದಸ್ಯ ಕಿಶೋರ್ ಶೆಟ್ಟಿ, ಕಾಂಗ್ರೆಸ್ ಕಾರ್ಯಕರ್ತರಾದ ಶಾಹುಲ್ ಹಮೀದ್ ಹಾಗೂ ಅನ್ವರ್ ಎಂಬ ಮೂವರು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಮಂಗಳೂರು ಪಾಲಿಕೆ ಕಚೇರಿ ಮುಂಭಾಗ ರಸ್ತೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿತ್ತು.
ಪ್ರತಿಭಟನೆ ವೇಳೆ ಖಾಸಗಿ ಸಿಟಿ ಬಸ್ ತಡೆದು ಗುಂಡಾಗಿರಿ ನಡೆಸಿದರು.
ಪೊಲೀಸರ ಎದುರೇ ಬಸ್ಸಿನ ಮುಂದಿನ ಗಾಜಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದರು. ಕಾಲಿನಿಂದ ಒಂದು ಗುಂಡಾಗಿರಿ ಪ್ರದರ್ಶಿಸಿದ್ದಾರೆ. ತಕ್ಷಣ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಾಹನದ ಬಳಿ ಕರೆದೊಯ್ದಿದ್ದರು.ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ಮೇಲೇನೆ ಮುಗಿಬಿದ್ದಿದ್ದಾರೆ.ಕಲ್ಲು ತೂರಾಟದ iವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಅಂತಿಮವಾಗಿ ಪೊಲೀಸರು ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.