ಕಲಬುರಗಿ : ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ವೇಗವಾಗಿ ಬಂದಂತಹ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸವಾರರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ನಡೆದಿದೆ.
ನಿನ್ನೆ ರಾತ್ರಿ ಈ ಒಂದು ಭೀಕರ ಅಪಘಾತ ಸಂಭವಿಸಿದ್ದು, ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್ ರಾಠೋಡ್, ರೋಹಿತ್ ಹಾಗೂ ಕೃಷ್ಣ ಎನ್ನುವವರು ಸಾವನ್ನಪ್ಪಿದ್ದಾರೆ.ಲಾಡ್ಲಾಪುರ ಗ್ರಾಮದಿಂದ ತಾಂಡಾಕ್ಕೆ ಹೋಗುತ್ತಿರುವಾಗ ಈ ಒಂದು ಭೀಕರ ಅಪಘಾತ ನಡೆದಿದೆ.
ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗಳಿಂದ ಮೂವರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ