ಹಾಸನ : ಸಾಕಷ್ಟು ಕಡೆ ಸಾಲ ಮಾಡಿದ್ದರಿಂದ ಸಾಲ ವಾಪಸ್ಸು ತೀರಿಸಲಾಗದೆ, ಒಂದೇ ಕುಟುಂಬದ ಮೂವರು ಹೇಮಾವತಿ ನದಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಕೆರೆಬೀದಿಯಲ್ಲಿ ನಡೆದಿದೆ.
ಹೌದು ಹೇಮಾವತಿ ನದಿ ಕಾಲುವೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆ ತಾಳಲಾರದೆ ಪತಿ, ಪತ್ನಿ ಹಾಗೂ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೇಮಾವತಿ ನದಿ ಕಾಲುವೆಗೆ ಹಾರಿ ಪತಿ ಶ್ರೀನಿವಾಸ್, ಪತ್ನಿ ಶ್ವೇತಾ ಹಾಗೂ ಪುತ್ರಿ ನಾಗಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಳೆದ ಮಂಗಳವಾರ ಮೂವರು ಮನೆಯಿಂದ ಕಾಣೆಯಾಗಿದ್ದರು. ಶ್ರೀನಿವಾಸ್ ಸಿಕ್ಕ ಸಿಕ್ಕ ಕಡೆಯಲ್ಲಿ ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.
ಕಾಣೆಯಾದ ಬಳಿಕ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಆದರೆ ಇಂದು ಹೇಮಾವತಿ ನದಿಯಲ್ಲಿ ಶ್ರೀನಿವಾಸ್ ಹಾಗೂ ಶ್ವೇತ ಮೃತದೇಹ ಪತ್ತೆಯಾಗಿದ್ದು, ಮಗಳು ನಾಗಶ್ರೀ ಮೃತದೆಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಹಾಸನದ ಜಿಲ್ಲಾ ಎಸ್ ಪಿ ಹಾಗೂ ಹುಲಿ ಅಧಿಕಾರಿಗಳು ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.