ಮಂಡ್ಯ : ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.
ಹೆಣ್ಣು ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ 15 ಜನರನ್ನ ಪೊಲೀಸರು ಬಂಧಿಸಿದ್ದು, ಇದೀಗ ಮತ್ತೆ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ನವೀನ್, ಹರಳಹಳ್ಳಿಯ ಜಬ್ಬರ್ ಬಾಬು, ಕೆ.ಆರ್.ನಗರದ ಶಂಕರ ಬಂಧಿತ ಆರೋಪಿಗಳು.
ಇನ್ನು ಕೆಲ ದಿನಗಳ ಹಿಂದೆಯಷ್ಟೇ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಆರೋಪಿಗಳಾದ ಅಭಿಷೇಕ್,ವೀ ರೇಶ್ ಸೇರಿದಂತೆ ಒಟ್ಟು 12 ಆರೋಪಿಗಳನ್ನು ಬುಧವಾರ ಬಂಧಿಸುವಲ್ಲಿ ಮಂಡ್ಯ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.