ಬೆಂಗಳೂರು : ಕನ್ನಡ ಹುಟ್ಟಿದ್ದೇ ತಮಿಳು ನಿಂದ ಎಂದು ಕಮಲ್ ಹಾಸನ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದು, ಅಲ್ಲದೆ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಮೊಂಡುತನ ತೋರಿದ್ದಾರೆ. ಈ ಹಿನ್ನೆಲೆ ಈಗಾಗಲೇ ರಾಜ್ಯದಲ್ಲಿ ಪ್ರತಿಭಟನೆಗಳು ಜೋರಾಗಿವೆ.
ಈ ವಿಚಾರವಾಗಿ ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯಾಗದಂತೆ ಬ್ಯಾನ್ ಮಾಡಬೇಕು ಎಂದು ಕನ್ನಡ ಚಲನಚಿತ್ರ ಮಂಡಳಿಯ ಪದಾಧಿಕಾರಿಗಳು ಸಿಎಂ ಜೊತೆಗೆ ಸಭೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ.
ಸಿನಿಮಾ ಬ್ಯಾನ್ ಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸರಕಾರ ಬೆಂಬಲ ಸೂಚಿಸಿದೆ. ಕನ್ನಡದ ವಿಚಾರವಾಗಿ ಎಲ್ಲಾ ಗಟ್ಟಿಯಾಗಿ ನಿಲ್ಲಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸರ್ಕಾರ ಕಾನೂನಾತ್ಮಕವಾಗಿ ಸಹಕಾರ ನೀಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ವಿಚಾರವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕಮಲ್ ಹಾಸನ್ ಚಿತ್ರ ಬ್ಯಾನ್ಗೆ ಕನ್ನಡಿಗರು ಇದೀಗ ಮಹಾಸಮರ ಸಾರಿದ್ದಾರೆ. ಸಿನಿಮಾ ಬಿಡುಗಡೆ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.