ನವದೆಹಲಿ : ಭಾರತದ ಪ್ರಜಾಪ್ರಭುತ್ವ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿ ಹೇರಿಕೆಗೆ ಇಂದು ಐವತ್ತು ವರ್ಷಗಳು ಸಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭಾರತದ ಜನರು ಈ ದಿನವನ್ನು ಸಂವಿಧಾನ ಹತ್ಯಾ ದಿವಸ್ ಎಂದು ಆಚರಿಸುತ್ತಾರೆ. ಈ ದಿನದಂದು, ಭಾರತೀಯ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳನ್ನು ಬದಿಗಿಡಲಾಯಿತು, ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಲಾಯಿತು, ಪತ್ರಿಕಾ ಸ್ವಾತಂತ್ರ್ಯವನ್ನು ಅಳಿಸಿಹಾಕಲಾಯಿತು ಮತ್ತು ಹಲವಾರು ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಸಾಮಾನ್ಯ ನಾಗರಿಕರನ್ನು ಜೈಲಿಗೆ ಹಾಕಲಾಯಿತು. ಆ ಸಮಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರವು ಪ್ರಜಾಪ್ರಭುತ್ವವನ್ನು ಬಂಧನದಲ್ಲಿ ಇರಿಸಿದಂತೆ ಇತ್ತು” ಎಂದು ಹೇಳಿದ್ದಾರೆ.
PM Narendra Modi tweets, "Today marks fifty years since one of the darkest chapters in India’s democratic history, the imposition of the Emergency. The people of India mark this day as Samvidhan Hatya Diwas. On this day, the values enshrined in the Indian Constitution were set… pic.twitter.com/uw43omZeAS
— ANI (@ANI) June 25, 2025