ಹಾಸನ: ಹಾಸನದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕಲ್ಲು ಗಣಿಗಾರಿಕೆ ವೇಳೆ ದೊಡ್ಡ ಬಂಡೆ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ನಾಲ್ವರು ಕಾರ್ಮಿಕರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಹಾಸನ ತಾಲೂಕಿನ ದೂಮಗೆರೆ ಗ್ರಾಮದ ಕಲ್ಲುಕ್ವಾರಿಯಲ್ಲಿ ಈ ಘಟನೆ ನಡೆದಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ನಾಲ್ವರು ಕೂಲಿ ಕಾರ್ಮಿಕರು ಹಾಸನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರ್ಮಿಕರು ಚಾಮರಾಜನಗರ ಮೂಲದವರಾಗಿದ್ದಾರೆ. ಹಾಸನದ ಬಂಡೆ ದೇವರಾಜ್ ಗೆ ಸೇರಿದ ಕಲ್ಲು ಕ್ವಾರಿಯಲ್ಲಿ ಘಟನೆ ನಡೆದಿದೆ. ಶಾಂತಿ ಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.