ಬೆಂಗಳೂರು : ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇದೀಗ ಮಳೆಗೆ ನಮ್ಮ ಮೆಟ್ರೋ ಟ್ರ್ಯಾಕ್ ಮೇಲೆ ಮರ ಬಿದ್ದು ತಾತ್ಕಾಲಿಕವಾಗಿ ಸಂಚಾರ್ ಸ್ಥಗಿತವಾಗಿದ್ದು, ಬಳಿಕ ಮೆಟ್ರೋ ಸಂಚಾರ ಪುನರಾರಂಭವಾಗಿದೆ.
ನೇರಳ ಮಾರ್ಗದ ಎಸ್ ವಿ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ಮಾರ್ಗದ ನಡುವೆ ಟ್ರ್ಯಾಕ್ ಮೇಲೆ ಮರ ಬಿದ್ದು ಸಂಚಾರ ಸ್ಥಗಿತವಾಗಿತ್ತು. ನೇರಳೆ ಮಾರ್ಗದ ಬೈಯ್ಯಪ್ಪನಹಳ್ಳಿ ಟು ವೈಟ್ ಫೀಲ್ಡ್ ಹಾಗೂ ಎಂಜಿ ರಸ್ತೆ ಟು ಚಲ್ಲಘಟ್ಟ ನಡುವೆ ಮಾತ್ರ ಸಂಚಾರ ಮಾಡಲಾಗುತ್ತಿದೆ.
ಬಿಬಿಎಂಪಿ ಸಿಬ್ಬಂದಿಗಳು ಮರ ತೆರವು ಮಾಡಿದ್ದು, ಇದೀಗ ಇಂದಿರಾನಗದಿಂದ ಮೆಟ್ರೋ ಸಂಚಾರ ಪುನರಾರಂಭವಾಗಿದೆ.