ಕಲಬುರ್ಗಿ : ಮದುವೆ ಸಮಾರಂಭ ಒಂದರಲ್ಲಿ ರಾಮ ಮಂದಿರದ ಹಾಡು ಒಂದಕ್ಕೆ ಎರಡು ಕೋಮುಗಳ ನಡುವೆ ಘರ್ಷಣೆ ನಡೆದು ಘಟನೆಯಲ್ಲಿ ಹಲವರಿಗೆ ಗಾಯಗಳಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಇಟಗಾ ಗ್ರಾಮದಲ್ಲಿ ನಡೆದಿದೆ.

ಹೌದು ಇತ್ತೀಚಿಗೆ ಕೋಲಾರದಲ್ಲಿ ಕೆಂಪೇಗೌಡ ಜಯಂತಿ ವೇಳೆ ಪಲ್ಲಕ್ಕಿ ತಡೆದು ಅನ್ಯ ಕೋಮಿನವರು ಗಲಾಟೆ ನಡೆಸಿದ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಕೆಲವು ದಿನಗಳ ಹಿಂದೆ ಮಂಗಳೂರಿನ ಬೋಳಿಯಾರ್ ಎಂಬಲ್ಲಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದವರ ಮೇಲೆ ಚೂರಿಯಿಂದ ಇರಿಯಲಾಗಿತ್ತು. ಇದೀಗ ಕಲ್ಬುರ್ಗಿಯಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದೆ.

ಇದೀಗ, ಘಟನೆ ಬಗ್ಗೆ ಭೀಮಾಶಂಕರ್ ತಾಯಿ ಮಾತನಾಡಿದ್ದು, ನಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘರ್ಷಣೆ ನಡೆದಿದೆ. ಪ್ರಕರಣದ ಕಲಿಸಿಕೊಂಡ ಪೊಲೀಸರು ಈಗ ಘಟನೆ ಕುರಿತಂತೆ ತನಿಖೆಯನ್ನು ಕೈಗೊಂಡಿದ್ದಾರೆ

Share.
Exit mobile version