ವಿಜಯನಗರ : ವಿಜಯನಗರ ಜಿಲ್ಲೆಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಕಲುಷಿತ ನೀರು ಸೇವಿಸಿ ಇಬ್ಬರು ಸಾವನಪ್ಪಿದ್ದು, 15 ಜನ ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಟಿ. ತುಂಬಿಗೇರಿಯಲ್ಲಿ ನಡೆದಿದೆ.
ಮೃತಪಟ್ಟವರನ್ನ ಗ್ರಾಮದ ಸುರೇಶ ಭೋವಿ (32) ಎಂಬುವರು ನಿನ್ನೆ ಮೃತಪಟ್ಟಿದ್ದರೆ, ಮಹಾಂತೇಶ ಭೋವಿ (35) ಎನ್ನುವವರು ಕಳೆದ ನಾಲ್ಕು ದಿನದ ಹಿಂದೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಇದೆ ವೇಳೆ 15 ಜನರು ಕಲುಷಿತ ನೀರು ಸೇವಿಸಿ ವಾಂತಿ ಭೇತಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ನೀರಿನ ಪೈಪ್ ಒಡೆದು, ಅದಕ್ಕೆ ಚರಂಡಿ ನೀರು ಸೇರಿ ನೀರು ಕಲುಷಿತಗೊಂಡಿದೆ. ಅದೇ ಕಲುಷಿತ ನೀರು ಕುಡಿದ ಜನರು ವಾಂತಿ- ಭೇದಿಯಿಂದ ಬಳಲುತ್ತಿದ್ದಾರೆ ಎನ್ನಲಾಗುತ್ತಿದ್ದು, ಆದರೆ ಗ್ರಾಮಸ್ಥರು ಕಲುಷಿತ ನೀರು ಸೇವನೆಯೆ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಗ್ರಾಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.