ಹಾಸನ : ಹಾಸನದಲ್ಲಿ ಮತ್ತೊಂದು ಘೋರ ದುರಂತ ಒಂದು ಸಂಭವಿಸಿದ್ದು, ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.
ಶ್ರೀಕಾಂತ್ (15) ಹಾಗೂ ವಿಜಯ (18) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಕೆರೆಗೆ ಬಿದ್ದ ಚಪ್ಪಲಿಯನ್ನು ತೆಗೆದುಕೊಳ್ಳಲು ಶ್ರೀಕಾಂತ್ ನೀರಿಗೆ ಇಳಿದಿದ್ದ. ಈ ವೇಳೆ ಈಜು ಬಾರದೆ ಶ್ರೀಕಾಂತ ಕೆರೆಯಲ್ಲಿ ಮುಳುಗುತ್ತಿದ್ದ. ಕೂಡಲೇ ಶ್ರೀಕಾಂತ್ ನನ್ನು ಕಾಪಾಡಲು ಹೋಗಿ ವಿಜಯ್ ಕೂಡ ಸಾವನ್ನಪ್ಪಿದ್ದಾನೆ. ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.