ದಾವಣಗೆರೆ : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಹೊನ್ನೆಬಾಗಿ ಗ್ರಾಮದಲ್ಲಿ ಮಾರಾಕಾಸ್ತ್ರಗಳನ್ನ ಹಿಡಿದು ಮಾರಮಾರಿ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಹೊನ್ನೇಬಾಗಿ ಎಂಬ ಗ್ರಾಮದಲ್ಲಿ ಶಾಸಕ ಶಿವಗಂಗಾ ಬಸವರಾಜ ಬೆಂಬಲಿಗರ ಮಾರಾಮಾರಿ ನಡೆದಿದೆ.
ಎರಡು ದಿನ ಹಿಂದೆ ವಾಹನ ನಿಲ್ಲಿಸುವ ವಿಚಾರಕ್ಕೆ ಜಗಳವಾಗಿತ್ತು. ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆ ಸಂತೆಯಲ್ಲಿ ಜಗಳವಾಗಿತ್ತು. ಇದೇ ಕಾರಣಕ್ಕೆ ಸ್ವಗ್ರಾಮ ಹೊನ್ನೇಬಾಗಿಯಲ್ಲಿ ಪರಸ್ಪರ ಹೊಡೆದಾಟ ನಡೆದಿದೆ ಒಂದು ಗುಂಪಿನ ಇರ್ಫಾನ್ ಬೇಗ್ (28), ಇಫ್ತಾರ್ ಅಲಿ, (22) ಮಲಿಕ್ (30), ನೌಶಾದ್ (41) ಸೇರಿದಂತೆ ಐವರಿಗೆ ಗಂಭೀರವಾದ ಗಾಯಗಳಾಗಿವೆ.
ಮತ್ತೊಂದು ಗುಂಪಿನ ಸಯ್ಯದ್ ಗನಿ (26), ಸೈಯದ್ ತನ್ವೀರ್ (30), ಸೈಯದ್ ಅಬ್ರಹಾಂ (37) ನ್ಯಾಮತ್ (34) ಸೇರಿದಂತೆ ಐವರಿಗೆ ಗಂಭೀರವಾದ ಗಾಯಗಳಾಗಿವೆ.ತಕ್ಷಣ ಗಾಯಾಳುಗಳನ್ನು ಚೆನ್ನಗಿರಿ ಮತ್ತು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಾಗಿದೆ.