ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆಗಾಗಿ ಇಂದು ಪವಿತ್ರ ಅಯ್ಯಪ್ಪಸ್ವಾಮಿ ಮಾಲೆ ಧರಿಸಿದ್ದಾರೆ.
ಇಂದು ಮುಂಜಾನೆ ಕೇರಳದ ಕೊಚ್ಚಿಯಲ್ಲಿರುವ ಪ್ರಸಿದ್ಧ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಕುಮಾರಸ್ವಾಮಿ ಅವರು ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಾಲೆ ಧರಿಸುವ ಮೂಲಕ ತಮ್ಮ ಶಬರಿಮಲೆ ಯಾತ್ರೆಯನ್ನು ಆರಂಭಿಸಿದರು.
ಇಂದು ರಾತ್ರಿ ಅಯ್ಯಪ್ಪ ದರ್ಶನ, ವಿಶೇಷ ಪೂಜೆ
ಸಾಂಪ್ರದಾಯಿಕವಾಗಿ ತಲೆಯ ಮೇಲೆ ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಹೆಚ್.ಡಿ. ಕುಮಾರಸ್ವಾಮಿ ಅವರು ತೆರಳಿದ್ದಾರೆ. ಇಂದು ರಾತ್ರಿ 8 ಗಂಟೆಗೆ ಅವರು ಶಬರಿಮಲೆಯಲ್ಲಿ ಅಯ್ಯಪ್ಪ ಸ್ವಾಮಿಯ ಪಾವನ ದರ್ಶನ ಪಡೆಯಲಿದ್ದಾರೆ. ದರ್ಶನದ ನಂತರ ರಾತ್ರಿ ಸುಮಾರು ಎರಡು ಗಂಟೆಗಳ ಕಾಲ ನಡೆಯಲಿರುವ ಪಡಿಪೂಜೆ ಸೇರಿದಂತೆ ವಿವಿಧ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಹೆಚ್.ಡಿ. ಕುಮಾರಸ್ವಾಮಿ ಅವರ ಈ ಶಬರಿಮಲೆ ಯಾತ್ರೆಯಲ್ಲಿ ಜೆಡಿಎಸ್ನ ಪ್ರಮುಖ ನಾಯಕರು ಸಾಥ್ ನೀಡಿದ್ದಾರೆ.
ಮಾಜಿ ಸಚಿವರಾದ ಸಾ.ರಾ. ಮಹೇಶ್
ಮಾಜಿ ಸಚಿವ ಸಿ.ಎಸ್. ಪುಟ್ಟರಾಜು
ಜೆಡಿಎಲ್ಪಿ ನಾಯಕ ಸುರೇಶ್ ಬಾಬು
ಎಂಎಲ್ಸಿ ಭೋಜೇಗೌಡ
ಇವರನ್ನೊಳಗೊಂಡಂತೆ ಒಟ್ಟು 30 ಜನ ಭಕ್ತರ ತಂಡವು ಸಚಿವರ ಜೊತೆಗೆ ಶಬರಿಮಲೆಗೆ ತೆರಳಿದೆ ಎಂದು ಮೂಲಗಳು ತಿಳಿಸಿವೆ.
ಓಂ ಸ್ವಾಮಿಯೇ ಶರಣಂ ಅಯ್ಯಪ್ಪ 🙏
ಶ್ರೀ ಶಬರಿಗಿರಿವಾಸ ಸ್ವಾಮಿ ಅಯ್ಯಪ್ಪನ ದರ್ಶನ ಭಾಗ್ಯಕ್ಕಾಗಿ ಮಾಲಾಧಾರಿಯಾಗಿ ಸನ್ನಿಧಾನಕ್ಕೆ ಯಾತ್ರೆ ಆರಂಭಿಸಲಾಯಿತು. #sabarimala#ayyappa#swamisaranam#swamyeayappa pic.twitter.com/c2S1M70oxS
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 15, 2026








