ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಗೆ ಇದೀಗ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ವಿಬಿ-ಜಿ ರಾಮ್ ಜಿ ಕಾಯ್ದೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ ಹೊಸ ಕಾಯ್ದೆಯು ಉದ್ಯೋಗ ಖಾತರಿ ತತ್ವಕ್ಕೆ ಮಾರಕವಾಗಿದೆ. ಈ ಹಿಂದಿನ ಮನರೇಗಾ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರದ್ದು 90% ಹಾಗೂ 10% ರಾಜ್ಯದ ಹಂಚಿಕೆಯಾಗಿದ್ದು ಈಗಿನ ಕಾಯ್ದೆಯು ರಾಜ್ಯ ಸರ್ಕಾರದ ಆರ್ಥಿಕತೆಗೆ ಹೊರೆಯಾಗಲಿದೆ.
ಹೊಸ ಕಾಯ್ದೆಯು 258 ಮತ್ತು 250ನೇ ವಿಧಿಯ ಉಲ್ಲಂಘನೆಯಾಗಿದೆ. ರಾಜ್ಯಗಳ ಜೊತೆಗೆ ಚರ್ಚೆ ನಡೆಸದೆ ಇದನ್ನು ಜಾರಿಗೆ ತರಲಾಗಿದೆ. ಈ ವಿಧಾನವು ಸಹಕಾರಿ ಒಕ್ಕೂಟದ ನಾಶಕ್ಕೆ ದಾರಿಯಾಗಿದೆ ಹಾಗಾಗಿ ವಿವಿಜಿ ರಾಮ್ ಜಿ ಕಾಯಿದೆ ಸ್ಥಗಿತಗೊಳಿಸುವಂತೆ ಪತ್ರ ಬರೆದಿದ್ದು ಸಮೃದ್ಧ ಭಾರತ ನಿರ್ಮಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಪ್ರಧಾನಿಗೆ ಪತ್ರ ಬರೆದು ಸಿಎಂ ಸಿದ್ದರಾಮಯ್ಯ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.








