Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆನಡಾದಲ್ಲಿ ವಾಸಿಸುವ ಕನಸು ಕಾಣುತ್ತಿದ್ದೀರಾ.? ಶಾಶ್ವತ ನಿವಾಸಕ್ಕೆ ಅರ್ಜಿ ಸಲ್ಲಿಸಲು 6,000 ವಿದೇಶಿಯರಿಗೆ ಆಹ್ವಾನ!

12/12/2025 10:05 PM

ಮದ್ಯಕ್ಕಿಂತ ಅಪಾಯಕಾರಿ ಈ ‘ಪಾನೀಯ’, ಕುಡಿದ್ರೆ ನಿಮ್ಮ ಕಿಡ್ನಿ ಹಾಳಾಗುತ್ವೆ!

12/12/2025 9:50 PM

ನಿಮ್ಮ ಹಳೆ ಫೋನ್ ಅದ್ಭುತ ಮಾಡುತ್ತೆ! ನಿಮಿಷದಲ್ಲೇ ಮನೆಯ ‘ಸೆಕ್ಯೂರಿಟಿ ಕ್ಯಾಮೆರಾ’ವನ್ನಾಗಿ ಪರಿವರ್ತಿಸ್ಬೋದು!

12/12/2025 9:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಂಚಭೂತಗಳಲ್ಲಿ ವೃಕ್ಷಮಾತೆ ‘ತುಳಸಿಗೌಡ’ ಲೀನ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | Tulasi Gowda
KARNATAKA

BREAKING : ಪಂಚಭೂತಗಳಲ್ಲಿ ವೃಕ್ಷಮಾತೆ ‘ತುಳಸಿಗೌಡ’ ಲೀನ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | Tulasi Gowda

By kannadanewsnow5717/12/2024 1:37 PM

ಉತ್ತರ ಕನ್ನಡ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ತುಳಸಿಗೌಡ ಅವರ ಅಂತ್ಯಕ್ರಿಯೆಯನ್ನು ಇಂದು ಅವರ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.

ಹಾಲಕ್ಕಿ ಸಮುದಾಯದ ಜಾನಪದ ಕಲಾವಿದೆ, ಪದ್ಮಶ್ರೀ ಸುಕ್ರಿ ಬೊಮ್ಮು ಗೌಡ ಅವರ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ತನ್ನದೇ ವಿಶಿಷ್ಠ ಸಾಧನೆಯ ಮೂಲಕ ಗಮನ ಸೆಳೆದಿದ್ದೇ ತುಳಸಿ ಗೌಡ. ಇವರು ಪರಿಸರ ಪ್ರೇಮಿ. ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡರ ಸಾಧನೆ ಅಪಾರ. ವೃಕ್ಷಮಾತೆ ಎಂದೆನಿಸಿಕೊಂಡಿರುವ ಈಕೆ ಬೆಳೆಸಿದ ಮರಗಳು ಒಂದಲ್ಲಾ, ಎರಡಲ್ಲಾ.. ಲಕ್ಷಗಟ್ಟಲೇ! ಇವರು ಕಟ್ಟಿಗೆ ಸಂಗ್ರಹಿಸಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಮತ್ತಿಘಟ್ಟ ಅರಣ್ಯ ನರ್ಸರಿಯಲ್ಲಿ ಸೇವೆ ಮಾಡಿ ನಿವೃತ್ತರಾದರೂ ಈಗಲೂ ಅಲ್ಲಿಗೆ ಹೋಗಿ ಯುವಕರಿಗೆ ತರಬೇತಿ, ಮಾರ್ಗದರ್ಶನ ನೀಡುತ್ತಿದ್ದರು.

ತುಳಸಿ ಕಳೆದ ಆರು ದಶಕಗಳಿಂದ ಈ ಕೆಲಸವನ್ನು ಯಾವುದೇ ಪ್ರತಿಫಲ ನಿರೀಕ್ಷೆ ಇಲ್ಲದೆ ಮಾಡುತ್ತಿದ್ದರು.. ಸ್ಥಳೀಯರು ಹೇಳುವಂತೆ ತುಳಸಿ ಅವರು, ಅರಣ್ಯ ಇಲಾಖೆ ನಡೆಸಿದ ಅರಣ್ಯೀಕರಣ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಅವರ ಸೇವೆಯನ್ನು ಗುರುತಿಸಿ, ಇಲಾಖೆ ಅವರ ಸೇವೆಯನ್ನು ಕ್ರಮಬದ್ಧಗೊಳಿಸಿತ್ತು. ೧೪ ವರ್ಷಗಳ ನಂತರ, ಅವರು ಸೇವೆಯಿಂದ ನಿವೃತ್ತರಾದರು. ಪಿಂಚಣಿ ಅವರ ಜೀವನೋಪಾಯದ ಏಕೈಕ ಮೂಲವಾಗಿತ್ತು.

ತುಳಸಿ ಅವರು ಜನಿಸಿದ್ದು ಬಡತನದಿಂದ ಬಳಲುತ್ತಿದ್ದ ಹಾಲಕ್ಕಿ ಬುಡಕಟ್ಟು ಕುಟುಂಬದಲ್ಲಿ. ಅವರು ಕೇವಲ ಎರಡು ವರ್ಷದಲ್ಲಿದ್ದಾಗ ಅವರ ತಂದೆಯ ಸಾವು ಅವರನ್ನು ತೀವ್ರವಾಗಿ ಬಾಧಿಸಿತ್ತು. ಆ ಬಳಿಕ ಅವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಸಿಗಲಿಲ್ಲ. ಬಡತನವು ಬಾಲ್ಯದಿಂದಲೂ ದೈನಂದಿನ ಕೂಲಿ ಕಾರ್ಮಿಕರಾದ ತನ್ನ ತಾಯಿಯೊಂದಿಗೆ ಕೆಲಸ ಮಾಡಲು ಪ್ರೇರೇಪಿಸಿತು. ತುಳಸಿ ಚಿಕ್ಕ ವಯಸ್ಸಿನಲ್ಲಿಯೇ ಗೋವಿಂದ ಗೌಡ ಅವರನ್ನು ವಿವಾಹವಾದರು. ಆದರೆ ಅವರು ಕೆಲವೇ ವರ್ಷಗಳಲ್ಲಿ ನಿಧನರಾದರು. ಎಲ್ಲ ದುರ್ಘಟನೆಗಳನ್ನು ಧೈರ್ಯದಿಂದ ಎದುರಿಸಿ ಇಡೀ ರಾಷ್ಟ್ರಕ್ಕೆ ಮಾದರಿಯಾಗಿರುವ ಜೀವನವನ್ನು ನಡೆಸಿದ್ದರು.

ಇಂತಹ ತುಳಸಿಗೌಡ ಅವರ ಪರಿಸರ ಪ್ರೇಮತೆಗೆ ಕೇಂದ್ರ ಸರ್ಕಾರದಿಂದ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ನಿನ್ನೆ ನಿಧನರಾಗಿದ್ದರು.

BREAKING : ವೃಕ್ಷಮಾತೆ ‘ತುಳಸಿಗೌಡ’ ಪಂಚಭೂತಗಳಲ್ಲಿ ಲೀನ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | Tulasi Gowda BREAKING: Vriksha Mata 'Tulsi Gowda' immersed in five elements: Cremated with full state honours | Tulasi Gowda
Share. Facebook Twitter LinkedIn WhatsApp Email

Related Posts

BREAKING: ರಾಜ್ಯಾದ್ಯಂತ ‘ಸರ್ಕಾರಿ ಶಾಲೆ’ಗಳಲ್ಲಿ ‘2,200 ಕೊಠಡಿ’ಗಳ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ

12/12/2025 8:56 PM5 Mins Read

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚಿಸಿ ಕರ್ನಾಟಕ ಸರ್ಕಾರ ಆದೇಶ

12/12/2025 8:53 PM2 Mins Read

ಇಂದು ಶಿಗ್ಗಾಂವಿ ಕ್ಷೇತ್ರದ ಜನತೆಯ ಬಹುದಿನದ ಕನಸು ನನಸು: ಸಂಸದ ಬಸವರಾಜ ಬೊಮ್ಮಾಯಿ

12/12/2025 8:22 PM1 Min Read
Recent News

ಕೆನಡಾದಲ್ಲಿ ವಾಸಿಸುವ ಕನಸು ಕಾಣುತ್ತಿದ್ದೀರಾ.? ಶಾಶ್ವತ ನಿವಾಸಕ್ಕೆ ಅರ್ಜಿ ಸಲ್ಲಿಸಲು 6,000 ವಿದೇಶಿಯರಿಗೆ ಆಹ್ವಾನ!

12/12/2025 10:05 PM

ಮದ್ಯಕ್ಕಿಂತ ಅಪಾಯಕಾರಿ ಈ ‘ಪಾನೀಯ’, ಕುಡಿದ್ರೆ ನಿಮ್ಮ ಕಿಡ್ನಿ ಹಾಳಾಗುತ್ವೆ!

12/12/2025 9:50 PM

ನಿಮ್ಮ ಹಳೆ ಫೋನ್ ಅದ್ಭುತ ಮಾಡುತ್ತೆ! ನಿಮಿಷದಲ್ಲೇ ಮನೆಯ ‘ಸೆಕ್ಯೂರಿಟಿ ಕ್ಯಾಮೆರಾ’ವನ್ನಾಗಿ ಪರಿವರ್ತಿಸ್ಬೋದು!

12/12/2025 9:10 PM

BREAKING: ರಾಜ್ಯಾದ್ಯಂತ ‘ಸರ್ಕಾರಿ ಶಾಲೆ’ಗಳಲ್ಲಿ ‘2,200 ಕೊಠಡಿ’ಗಳ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ

12/12/2025 8:56 PM
State News
KARNATAKA

BREAKING: ರಾಜ್ಯಾದ್ಯಂತ ‘ಸರ್ಕಾರಿ ಶಾಲೆ’ಗಳಲ್ಲಿ ‘2,200 ಕೊಠಡಿ’ಗಳ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ

By kannadanewsnow0912/12/2025 8:56 PM KARNATAKA 5 Mins Read

ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನಲ್ಲಿ ಹೊಸ ಶಆಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ.…

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚಿಸಿ ಕರ್ನಾಟಕ ಸರ್ಕಾರ ಆದೇಶ

12/12/2025 8:53 PM

ಇಂದು ಶಿಗ್ಗಾಂವಿ ಕ್ಷೇತ್ರದ ಜನತೆಯ ಬಹುದಿನದ ಕನಸು ನನಸು: ಸಂಸದ ಬಸವರಾಜ ಬೊಮ್ಮಾಯಿ

12/12/2025 8:22 PM

ಚಿಕ್ಕಮಗಳೂರಿನಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ‘ಸ್ಪೈಸ್ ಪಾರ್ಕ್’ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

12/12/2025 8:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.