ಬಿಹಾರ : ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದು, ಅಮಾಯಕ ಜನರನ್ನು ಕೊಂದ ಉಗ್ರರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.
ನವದೆಹಲಿ: ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, 140 ಕೋಟಿ ಭಾರತೀಯರ ಮೇಲೆ ದಾಳಿಯಾದಂತಾಗಿದೆ. ಭಯೋತ್ಪಾದಕರಿಗೆ ಹುಡುಕಿ ಹುಡುಕಿ ಶಿಕ್ಷೆ ಕೊಡುತ್ತೇವೆ. ಎಂದು ಎಚ್ಚರಿಕೆ ನೀಡಿದ್ದಾರೆ.
#WATCH | On Pahalgam terror attack, PM Modi says, "Today, on the soil of Bihar, I say to the whole world, India will identify, trace and punish every terrorist and their backers. We will pursue them to the ends of the Earth. India's spirit will never be broken by terrorism.… pic.twitter.com/8SPHOAJIi2
— ANI (@ANI) April 24, 2025
ಬಿಹಾರದ ಮಧುಬನಿಯಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗೆ ಗೌರವ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ನಾಯಕರು ಮೌನ ಆಚರಿಸಿದರು.