Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಳಗಾವಿಯಲ್ಲಿ ಸುಪಾರಿ ನೀಡಿ ವಕೀಲ ಸಂತೋಷ್ ಕಿಡ್ನಾಪ್ & ಹತ್ಯೆ ಕೇಸ್ : 8 ಆರೋಪಿಗಳು ಅರೆಸ್ಟ್!

08/07/2025 10:51 AM

BIG NEWS : ರಾಜ್ಯದ `ಶಾಲಾ ಶಿಕ್ಷಕರಿಗೆ’ ಮುಖ್ಯ ಮಾಹಿತಿ : `ವಿಶೇಷ ಹೆಚ್ಚುವರಿ ಬಡ್ತಿ’ ಮಂಜೂರಾತಿಗೆ ಈ ದಾಖಲೆಗಳು ಕಡ್ಡಾಯ.!

08/07/2025 10:48 AM

ಅನಿವಾಸಿ ಭಾರತೀಯರಿಗೆ ಗುಡ್‌ ನ್ಯೂಸ್‌ : 23 ಲಕ್ಷಕ್ಕೆ ಜೀವಿತಾವಧಿ ‘ಗೋಲ್ಡನ್‌ ವೀಸಾ’ ಪರಿಚಯಿಸಿದ UAE

08/07/2025 10:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮುಂದಿನ 5 ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ
KARNATAKA

BREAKING : ಮುಂದಿನ 5 ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ

By kannadanewsnow0503/10/2024 4:25 PM

ಮೈಸೂರು : ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಅವರು ಮೈಸೂರಿನಲ್ಲಿ ನಾಡಹಬ್ಬ ವಿಶ್ವವಿಖ್ಯಾತ ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ.

ಚುನಾವಣಾ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾನು ಮತ್ತು ಡಿ.ಕೆ.ಶಿವಕುಮಾರ್‌ ಅವರು ಚುನಾವಣೆಯಲ್ಲಿ ಜಯ ಗಳಿಸಿದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದೆವು. ಅದರಂತೆ ಚುನಾವಣೆಯಲ್ಲಿ ಜಯ ಗಳಿಸಿದ ಎಂಟೇ ತಿಂಗಳಲ್ಲಿ ಎಲ್ಲಾ 5 ಯೋಜನೆಗಳನ್ನು ಜಾರಿಗೊಳಿಸಿದ್ದೇವೆ.

ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳಿಂದ ಪ್ರತಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ 40 ರಿಂದ 50 ಸಾವಿರ ರೂಪಾಯಿ ಆರ್ಥಿಕ ನೆರವು ದೊರೆಯುತ್ತಿದೆ.

ಗೃಹಲಕ್ಷ್ಮಿ ಯೋಜನೆಯಡಿ 1.21 ಕೋಟಿ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು ರೂ.2 ಸಾವಿರ ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 1.40 ಕುಟುಂಬಗಳು ಉಚಿತ ವಿದ್ಯುತ್‌ ಸೌಲಭ್ಯ ಪಡೆಯುತ್ತಿವೆ. ಯುವ ನಿಧಿ ಯೋಜನೆಯಡಿ 1.82 ಲಕ್ಷ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾದಾರರು ಆರ್ಥಿಕ ಪ್ರಯೋಜನ ಪಡೆಯುತ್ತಿದ್ದಾರೆ.

ಈ ವರ್ಷ ಉತ್ತಮ ಮಳೆಯಾಗಿದ್ದು, ಇಡೀ ರಾಜ್ಯದ ರೈತರು ಸಂತೋಷದಿಂದ ಇದ್ದಾರೆ. ಮುಂಗಾರು ಬಿತ್ತನೆ ರಾಜ್ಯದಲ್ಲಿ 99 ಶೇ ಆಗಿದೆ. ಇನ್ನೂ ಹೆಚ್ಚು ಮಳೆಯಾಗಲಿ, ಹೆಚ್ಚು ಬೆಳೆಯಾಗಲಿ ನಮ್ಮ ನಿರೀಕ್ಷೆಗಿಂತ ಮೀರಿ ಬೆಳೆ ಬೆಳೆಯಲಿ ಎಂದು ಚಾಮುಂಡೇಶ್ವರಿ ತಾಯಿಯನ್ನು ಪ್ರಾರ್ಥಿಸುತ್ತೇನೆ. ಮಳೆ – ಬೆಳೆ ಆದರೆ ಮಾತ್ರ ಜನರು ಸುಖ ಶಾಂತಿಯಿಂದ ಬದುಕಲು ಸಾಧ್ಯ.

ಈ ಬಾರಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ದಸರಾ ಮಹೋತ್ಸವ ಅದ್ದೂರಿಯಾಗಿ ಮಾಡಲು ಸೂಚನೆ ನೀಡಿದ್ದೇನೆ. ದಸರಾ ನಾಡಹಬ್ಬವಾಗಬೇಕು, ಅಧಿಕಾರಿಗಳ ಹಬ್ಬವಾಗಬಾರದು. ಎಲ್ಲಾ ಕಾರ್ಯಕ್ರಮಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.

ಈ ಬಾರಿ ದಸರಾ ಮಹೋತ್ಸವಕ್ಕೆ ಹಂ.ಪ. ನಾಗರಾಜಯ್ಯ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಅವರಿಗೆ ಈ ಮೊದಲೇ ಈ ಅವಕಾಶ ದೊರೆಯಬೇಕಿತ್ತು. ಹಂ.ಪ. ನಾಗರಾಜಯ್ಯ ಅವರು ಕನ್ನಡ ಸಾಹಿತ್ಯ ಹಾಗೂ ಜೈನ ಸಾಹಿತ್ಯಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಕನ್ನಡ ಸಾರಸ್ವತ ಲೋಕಕ್ಕೆ ಅವರ ಅಪಾರ ಕೊಡುಗೆಯನ್ನು ಕನ್ನಡ ನಾಡಿನ ಜನ ಮರೆಯಲು ಸಾಧ್ಯವಿಲ್ಲ. ಅವರ ಆಯ್ಕೆ ಔಚಿತ್ಯಪೂರ್ಣ. ಕರ್ನಾಟಕ ಕಂಡ ಅಪರೂಪದ ಸಾಹಿತಿ ಅವರು.

ಹಂ.ಪ. ನಾಗರಾಜಯ್ಯ ಅವರು ಮೌಲ್ಯಯುತ ಭಾಷಣ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರಕಾರಗಳನ್ನು ವಾಮಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮಗಳಾಗಿದ್ದು, ಪ್ರಜಾಪ್ರಭುತ್ವ ಇನ್ನಷ್ಟು ಬಲಪಡಿಸಬೇಕು ಎಂದಿರುವುದು ಔಚಿತ್ಯಪೂರ್ಣವಾಗಿದೆ.

ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ.

‌ಸತ್ಯಕ್ಕೆ ಯಾವತ್ತೂ ಜಯ ದೊರೆಯುತ್ತದೆ. ನಿಮ್ಮೆಲ್ಲರ ಆಶೀರ್ವಾದ, ಈ ರಾಜ್ಯದ ಜನರ ಆಶೀರ್ವಾದ ಈ ಸರ್ಕಾರದ ಮೇಲೆ ಇರುವ ತನಕ ಯಾರಿಗೂ ಏನೂ ಮಾಡಲು ಸಾಧ್ಯವಿಲ್ಲ. ನಾನು ಈ ಕ್ಷೇತ್ರದಲ್ಲಿ ಐದು ಬಾರಿ ಗೆದ್ದಿದ್ದೇನೆ. ಮೂರು ಬಾರಿ ಸೋತಿದ್ದೇನೆ.ಚಾಮುಂಡೇಶ್ವರಿ ತಾಯಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಇಲ್ಲಿಯವರೆಗೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ರೆ ಇಷ್ಟು ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ.

ನನಗೆ ನ್ಯಾಯಾಲಯಗಳಲ್ಲಿ ನಂಬಿಕೆಯಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ನಡೆಯುವ ಪ್ರಯತ್ನ ಮಾಡುತ್ತಿದ್ದೇವೆ. ಗಾಂಧೀಜಿ ಅವರು ಹೇಳಿದಂತೆ ಆತ್ಮಸಾಕ್ಷಿಯ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದುದು. ಆತ್ಮಸಾಕ್ಷಿಗೆ ತಕ್ಕಂತೆ ನಡೆದಿದ್ದೇನೆ ಎಂಬ ದೃಢ ನಂಬಿಕೆ ಇದೆ.ಪರಸ್ಪರರನ್ನು ಪ್ರೀತಿಸಬೇಕೆ ಹೊರತು ಯಾರನ್ನೂ ದ್ವೇಷಿಸಬಾರದು. ಎಲ್ಲಾ ಧರ್ಮಗಳು ಪರಸ್ಪರ ಪ್ರೀತಿಸಿ ಮಾನವರಾಗಿ ಬಾಳುವ ಸಂದೇಶವನ್ನು ನೀಡಿವೆ ಎಂದು ಅವರು ತಿಳಿಸಿದರು.

ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ.

‌ಸತ್ಯಕ್ಕೆ ಯಾವತ್ತೂ ಜಯ ದೊರೆಯುತ್ತದೆ. ನಿಮ್ಮೆಲ್ಲರ ಆಶೀರ್ವಾದ, ಈ ರಾಜ್ಯದ ಜನರ…

— Siddaramaiah (@siddaramaiah) October 3, 2024

Share. Facebook Twitter LinkedIn WhatsApp Email

Related Posts

BREAKING : ಬೆಳಗಾವಿಯಲ್ಲಿ ಸುಪಾರಿ ನೀಡಿ ವಕೀಲ ಸಂತೋಷ್ ಕಿಡ್ನಾಪ್ & ಹತ್ಯೆ ಕೇಸ್ : 8 ಆರೋಪಿಗಳು ಅರೆಸ್ಟ್!

08/07/2025 10:51 AM1 Min Read

BIG NEWS : ರಾಜ್ಯದ `ಶಾಲಾ ಶಿಕ್ಷಕರಿಗೆ’ ಮುಖ್ಯ ಮಾಹಿತಿ : `ವಿಶೇಷ ಹೆಚ್ಚುವರಿ ಬಡ್ತಿ’ ಮಂಜೂರಾತಿಗೆ ಈ ದಾಖಲೆಗಳು ಕಡ್ಡಾಯ.!

08/07/2025 10:48 AM1 Min Read

BIG NEWS : ರಾಜ್ಯದಲ್ಲಿ 50 ಹೊಸ `ಮೌಲಾನಾ ಆಜಾದ್ ಮಾದರಿ ಶಾಲೆ’ ಪ್ರಾರಂಭಿಸಲು ಮಂಜೂರಾತಿ : ರಾಜ್ಯ ಸರ್ಕಾರ ಮಹತ್ವದ ಆದೇಶ

08/07/2025 10:33 AM2 Mins Read
Recent News

BREAKING : ಬೆಳಗಾವಿಯಲ್ಲಿ ಸುಪಾರಿ ನೀಡಿ ವಕೀಲ ಸಂತೋಷ್ ಕಿಡ್ನಾಪ್ & ಹತ್ಯೆ ಕೇಸ್ : 8 ಆರೋಪಿಗಳು ಅರೆಸ್ಟ್!

08/07/2025 10:51 AM

BIG NEWS : ರಾಜ್ಯದ `ಶಾಲಾ ಶಿಕ್ಷಕರಿಗೆ’ ಮುಖ್ಯ ಮಾಹಿತಿ : `ವಿಶೇಷ ಹೆಚ್ಚುವರಿ ಬಡ್ತಿ’ ಮಂಜೂರಾತಿಗೆ ಈ ದಾಖಲೆಗಳು ಕಡ್ಡಾಯ.!

08/07/2025 10:48 AM

ಅನಿವಾಸಿ ಭಾರತೀಯರಿಗೆ ಗುಡ್‌ ನ್ಯೂಸ್‌ : 23 ಲಕ್ಷಕ್ಕೆ ಜೀವಿತಾವಧಿ ‘ಗೋಲ್ಡನ್‌ ವೀಸಾ’ ಪರಿಚಯಿಸಿದ UAE

08/07/2025 10:43 AM

Heart Attack: ಹೃದಯಾಘಾತದ ಆರೈಕೆಗೆ ‘ಗೋಲ್ಡನ್ ಅವರ್’ ಏಕೆ ಮುಖ್ಯ ಎಂದು ಇಲ್ಲಿ‌ ತಿಳಿಯಿರಿ..!

08/07/2025 10:34 AM
State News
KARNATAKA

BREAKING : ಬೆಳಗಾವಿಯಲ್ಲಿ ಸುಪಾರಿ ನೀಡಿ ವಕೀಲ ಸಂತೋಷ್ ಕಿಡ್ನಾಪ್ & ಹತ್ಯೆ ಕೇಸ್ : 8 ಆರೋಪಿಗಳು ಅರೆಸ್ಟ್!

By kannadanewsnow0508/07/2025 10:51 AM KARNATAKA 1 Min Read

ಬೆಳಗಾವಿ : ಸುಪಾರಿ ನೀಡಿ ವಕೀಲ ಸಂತೋಷ್ ಕಿಡ್ನಾಪ್ ಮತ್ತು ಕೊಲೆ ಕೇಸ್ ಗೆ ಸಂಬಂಧಿಸಿದಂತೆ 8 ಇದೀಗ ಆರೋಪಿಗಳನ್ನು…

BIG NEWS : ರಾಜ್ಯದ `ಶಾಲಾ ಶಿಕ್ಷಕರಿಗೆ’ ಮುಖ್ಯ ಮಾಹಿತಿ : `ವಿಶೇಷ ಹೆಚ್ಚುವರಿ ಬಡ್ತಿ’ ಮಂಜೂರಾತಿಗೆ ಈ ದಾಖಲೆಗಳು ಕಡ್ಡಾಯ.!

08/07/2025 10:48 AM

BIG NEWS : ರಾಜ್ಯದಲ್ಲಿ 50 ಹೊಸ `ಮೌಲಾನಾ ಆಜಾದ್ ಮಾದರಿ ಶಾಲೆ’ ಪ್ರಾರಂಭಿಸಲು ಮಂಜೂರಾತಿ : ರಾಜ್ಯ ಸರ್ಕಾರ ಮಹತ್ವದ ಆದೇಶ

08/07/2025 10:33 AM

SHOCKING : ಊಟ ಆದ್ಮೇಲೆ ಎಲೆ, ಅಡಿಕೆ ತಿನ್ನೋ ರೂಢಿ ಇದೆಯಾ? ಈ ಅಡಿಕೆ ತಿಂದರೆ ನಿಮ್ಮ ಪ್ರಾಣಕ್ಕೆ ಕುತ್ತು ಗ್ಯಾರಂಟಿ!

08/07/2025 10:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.