ಬೆಂಗಳೂರು : ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದೆ.
ತಪಾಸಣೆಯಲ್ಲಿ ಮೈಸೂರು ಕಂಪನಿಯ ಓ ಶಾಂತಿ ಗೋಲ್ಡ್ ಕುಂಕುಮ್ ಸೇರಿದಂತೆ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು ಅಸುರಕ್ಷಿತ ಎಂದು ವರದಿ ಬಂದಿದೆ. ರಾಜ್ಯ, ಹೊರ ರಾಜ್ಯದ ಔಷಧ ತಯಾರಿಕಾ ಕಂಪನಿಗಳು ಈ ಪಟ್ಟಿಯಲ್ಲಿವೆ. ಅಸುರಕ್ಷಿತ ಔಷಧಿ ಮತ್ತು ಕಾಂತಿವರ್ಧಕಗಳ ಬಳಕೆ ಮತ್ತು ಮಾರಾಟ ಮಾಡದಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಇದೀಗ ಕುಂಕುಮ, ಪ್ಯಾರಾಸಿಟಮಲ್ ಬಳಕೆಗೆ ಬಳಕೆಗೆ ಯೋಗ್ಯವಲ್ಲ ಎಂಬ ವರದಿ ಕುರಿತು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯ ನೀಡಿದ್ದು, ಯಾವ ಬ್ಯಾಚ್ ಫೇಲಾಗಿದೆ ಅದನ್ನು ವಾಪಸ್ ಪಡೆಯಲಾಗುತ್ತದೆ.ಆಹಾರ ಸುರಕ್ಷತಾ ಔಷಧ ನಿಯಂತ್ರಣದಿಂದ ಹಿಂಪಡೆಯಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದರು.
ಉಳಿದ ಬ್ಯಾಚುಗಳನ್ನು ಪರೀಕ್ಷೆಗೆ ಒಳಪಡಿಸುತ್ತೇವೆ.ಯಾವ ಔಷಧ ಪರೀಕ್ಷೆ ಮಾಡಿಸಬೇಕು ಎಂದು ಯೋಚನೆ ರೂಪಿಸಿದ್ದೇವೆ. ಟೆಸ್ಟ್ ಮಾಡಬೇಕಾದ ಔಷಧಿ ಬಗ್ಗೆ ಡ್ರಗ್ ಕಂಟ್ರೋಲರ್ ಗೆ ಮಾಹಿತಿ ನೀಡಲಾಗಿದೆ. ಕುಂಕುಮ ಗುಣಮಟ್ಟ ಇಲ್ಲ ಅಂತ ವರದಿ ಬಂದಿದೆ. ನಾವು ಸರಬರಾಜು ಆಗಿರುವುದನ್ನು ವಾಪಸ್ ಪಡೆಯುತ್ತೇವೆ.ಗುಣಮಟ್ಟದ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕು. ತಯಾರಕರು ಸರಿಯಾದ ವ್ಯವಸ್ಥೆಯಲ್ಲಿ ಉತ್ಪಾದನೆ ಮಾಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದರು.