ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ದಲ್ಲಿ ಬಂಧನವಾಗಿದ್ದ ಮಾಜಿ ಸಚಿವ ಬಿ ನಾಗೇಂದ್ರ ಅವರು ನಿನ್ನೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಳಿಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿಯಾದರು.
ಇನ್ನು ನಾಗೇಂದ್ರ ಅವರ ಮೇಲೆ 18 ಕೇಸ್ಗಳಿದ್ದು, ಇದರಿಂದ ಹೊರಬರುವ ಬದಲು ಚುನಾವಣಾ ಕಣ ಎನ್ನುವುದೆಲ್ಲ ಸುಳ್ಳು ಎಂದು ಜನಾರ್ಧನ ರೆಡ್ಡಿ ಆರೋಪಿಸಿದ್ದಾರೆ.ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು 18 ಅಲ್ಲ 100 ಕೇಸ್ ಹಾಕಿಸಿಕೊಂಡರು ಮುಖ್ಯಮಂತ್ರಿ ಆಗುತ್ತಾರೆ. ಮುಂದೆ ನಮಗೂ ಒಳ್ಳೆ ಭವಿಷ್ಯವಿದೆ. ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿ ಕೆಲಸ ಮಾಡಿಕೊಂಡು ಹೋದರೆ ಮುಖ್ಯಮಂತ್ರಿ ಯಾಕೆ ಆಗಬಾರದು ಎಂದು ಪ್ರಶ್ನಿಸಿದರು.
ಇದೇ ವೇಳೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ವಿಚಾರಣೆಯ ವೇಳೆ ಇಡಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೆಸರನ್ನು ಹೇಳಲು ಮಕ್ಕಳ ಹಾಕಿದ್ದಾರೆ ಎಂಬ ಗಂಭೀರವಾದ ಆರೋಪ ಮಾಡಿದ್ದಾರೆ.