ಬೆಳಗಾವಿ : ಅನಾರೋಗ್ಯದ ಸಮಸ್ಯೆಯಿಂದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಮ್ಯಾಶ್ರೀ ಎಂದು ತಿಳಿದುಬಂದಿದೆ.
ರಮ್ಯಾಶ್ರೀ ಕಳೆದ ನಾಲ್ಕು ವರ್ಷದ ಹಿಂದೆ ಮೊದಲ ಮದುವೆಯಾಗಿತ್ತು. ಬಳಿಕ ಪಾತಿಯಿಂದ ದೂರವಾಗಿ ಕಳೆದ ಮೂರು ತಿಂಗಳಿಂದ ಮತ್ತೊಂದು ಯುವಕನನ್ನು ವರಿಸಿದ್ದಳು. ನಿಡಗುಂದಿ ಗ್ರಾಮದ ಬಸವರಾಜ ಹಂಪನ್ನವರ ಎಂಬವರನ್ನು ಮದುವೆಯಾಗಿದ್ದಳು.
ಆದರೆ ಮದುವೆಯಾಗಿ ಮೂರು ತಿಂಗಳಲ್ಲಿ ರಮ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಪತಿ ಬಸವರಾಜ ಕೂಡ ಆತ್ನಹತ್ಯೆಗೆ ಯತ್ನಿಸಿದ್ದಾರೆ. ಭಯಗೊಂಡು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಪಟ್ಟಿದ್ದಾರೆ. ಕೊಡಲಿ ಅವರನ್ನು ಹಾರೂಗೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ಮಧ್ಯ ಹೋರಾಡುತ್ತಿದ್ದಾರೆ.
		







