BREAKING : ಮೂಡಬಿದಿರಿಯಲ್ಲಿ ಪಿಯು ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಯುವಕ!

ಮೂಡಬಿದಿರೆ : ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪಿಯು ವಿದ್ಯಾರ್ಥಿನಿಗೆ ಕತ್ತರಿಯಿಂದ ಯುವಕನೊಬ್ಬ ಇರಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಈ ಘಟನೆ ನಡೆದಿದ್ದು, ಆಳ್ವಾಸ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿರುವ ಯುವತಿಗೆ ಯುವಕನೊಬ್ಬ ಕತ್ತರಿಯಿಂದ ಇರಿದಿದ್ದಾನೆ. ತುಮಕೂರು ಮೂಲದ ಯುವಕ ಮಂಜುನಾಥ್ ಪಿಯು ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದು, ಫೋನ್ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಕೋಪಗೊಂಡು ಕತ್ತರಿಯಿಂದ ಇರಿದಿದ್ದಾನೆ. ಸದ್ಯ ಮಂಜುನಾಥ್ ನನ್ನು ಪೊಲಿಸರು ಬಂಧಿಸಿದ್ದಾರೆ.