Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

07/03/2026 7:55 AM

​’ಕೇರಳ ಸ್ಟೋರಿ-2′ ನೋಡಲು ಜನ ಬರುತ್ತಿಲ್ಲ ಎನ್ನುವುದೇ ಒಂದು ಶುಭ ಸುದ್ದಿ: ರಾಹುಲ್ ಗಾಂಧಿ ಮಾರ್ಮಿಕ ನುಡಿ!

07/03/2026 7:42 AM

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಯುವನಿಧಿ’ ವಿಶೇಷ ನೋಂದಣಿ ಅಭಿಯಾನ : ಸರ್ಕಾರ ಮಹತ್ವದ ಆದೇಶ.!
KARNATAKA

BREAKING : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಯುವನಿಧಿ’ ವಿಶೇಷ ನೋಂದಣಿ ಅಭಿಯಾನ : ಸರ್ಕಾರ ಮಹತ್ವದ ಆದೇಶ.!

By kannadanewsnow5705/01/2025 1:45 PM

ಬೆಂಗಳೂರು : ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025 ರವರೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಆದೇಶದಲ್ಲಿ ಏನಿದೆ?

ಸೂಚಿತ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗಿ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿದ ಮಹತ್ತರ ಯೋಜನೆಯಾಗಿರುತ್ತದೆ. ಈ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ(6 ಬೋರ್ಡ್‌ಗಳಿಂದ) ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ.

2023-24 ನೇ ಸಾಲಿನಲ್ಲಿ ತೇರ್ಗಡೆಯಾದ 527273 ಅಭ್ಯರ್ಥಿಗಳ ದತ್ತಾಂಶವು ನ್ಯಾಡ್ ಪೋರ್ಟಲ್ ನಲ್ಲಿ ಅಪ್ ಲೋಡ್ ಆಗಿದ್ದರೂ ಸಹ ನಿರೀಕ್ಷಿತ ಮಟ್ಟದಲ್ಲಿ ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ನೋಂದಣಿಯಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋಂದಾಯಿಸಲು “ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025ರ ವರೆಗೆ ಹಮ್ಮಿಕೊಳ್ಳಲಾಗಿದ್ದು ಅಭ್ಯರ್ಥಿಗಳು ಈ ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕಾಗಿದೆ.

* ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 06 ವರ್ಷಗಳ ವರೆಗೆ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮದವರೆಗೆ ಅಧ್ಯಯನ ಮಾಡಿದವರು)

+ ತೇರ್ಗಡೆ ಹೊಂದಿರುವ 180 ದಿನಗಳ ನಂತರವೂ ಉದ್ಯೋಗ ದೊರಕದೆ, ಉನ್ನತ ವ್ಯಾಸಂಗಕ್ಕೆ ದಾಖಲಾಗದೆ ಇರುವ ಅಭ್ಯರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ.

+ ಸ್ವಯಂ ಉದ್ಯೋಗ ಹೊಂದಿಲ್ಲದ ಅಭ್ಯರ್ಥಿಗಳು.

+ ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ ಅಭ್ಯರ್ಥಿಗಳು,

ಈ ಹಿನ್ನೆಲೆಯಲ್ಲಿ ಇಲಾಖಾ ವ್ಯಾಪ್ತಿಯ ಎಲ್ಲಾ ಪದವಿ/ ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಹಾಗೂ ಡಿಪ್ಲೋಮ ಕಾಲೇಜುಗಳ ಪ್ರಾಂಶುಪಾಲರುಗಳು 2023 ಹಾಗೂ 2024 ನೇ ಸಾಲಿನಲ್ಲಿ ತಮ್ಮ ಕಾಲೇಜುಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ನೋಂದಣಿಗಾಗಿ ತಮ್ಮ ಕಾಲೇಜುಗಳಲ್ಲಿ ಯುವನಿಧಿ ವಿಶೇಷ ನೋಂದಣಿ ಸಹಾಯ ಕೇಂದ್ರಗಳನ್ನು ತೆರೆದು, ಕೇಂದ್ರಕ್ಕೆ ಅತ್ಯವಶ್ಯಕವಾಗಿ ಬೇಕಾದ ಗಣಕ ಯಂತ್ರ ವ್ಯವಸ್ಥೆ ಹಾಗೂ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಕಾಲೇಜು ಹಾಗೂ ಸ್ಥಳೀಯ ಮಟ್ಟದಲ್ಲಿ ಬ್ಯಾನರ್/ಪೋಸ್ಮರ್‌ಗಳನ್ನು ಅಳವಡಿಸಿ, ವ್ಯಾಪಕ ಪ್ರಚಾರವನ್ನು ಕೈಗೊಂಡು ಅರ್ಹ ಅಭ್ಯರ್ಥಿಗಳಿಂದ ಗರಿಷ್ಠ ಮಟ್ಟದ ನೋಂದಣಿ ಮಾಡಿಸುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ.

ಕಾಲೇಜುಗಳಲ್ಲಿ ಪ್ರಾಂಶುಪಾಲರು ಯುವನಿಧಿ ವಿಶೇಷ ನೋಂದಣಿ ಅಭಿಯಾನಕ್ಕಾಗಿ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿಗಳು ಹಾಗೂ ಐ.ಟಿ ಕೋ-ಆರ್ಡಿನೇಟರ್ ಗಳಿಗೆ ಉಸ್ತುವರಿಯನ್ನು ವಹಿಸಿ ಅರ್ಹ ಅಭ್ಯರ್ಥಿಗಳಿಂದ ಅತಿ ಹೆಚ್ಚು ನೋಂದಣಿ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವಂತೆ ಈ ಮೂಲಕ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಯುವನಿಧಿ ಯೋಜನೆಯ ವೆಬ್‌ಸೈಟನ್ನು ಸಂಪರ್ಕಿಸುವುದು: https://yuvanidhischeme.in/

 

BREAKING : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಯುವನಿಧಿ' ವಿಶೇಷ ನೋಂದಣಿ ಅಭಿಯಾನ : ಸರ್ಕಾರ ಮಹತ್ವದ ಆದೇಶ.! BREAKING: 'Yuvanidhi' special registration drive in all colleges in the state: Govt
Share. Facebook Twitter LinkedIn WhatsApp Email

Related Posts

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

07/03/2026 7:55 AM1 Min Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM1 Min Read

ಪೆಟ್ರೋಲ್-ಡೀಸೆಲ್ ಖಾಲಿಯಾಗುತ್ತಿದೆಯೇ? ಪೆಟ್ರೋಲ್ ಬಂಕ್‌ ಗೆ ಹೋಗುವ ಮುನ್ನ ಈ ಸುದ್ದಿ ಓದಿ !

07/03/2026 7:26 AM2 Mins Read
Recent News

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

07/03/2026 7:55 AM

​’ಕೇರಳ ಸ್ಟೋರಿ-2′ ನೋಡಲು ಜನ ಬರುತ್ತಿಲ್ಲ ಎನ್ನುವುದೇ ಒಂದು ಶುಭ ಸುದ್ದಿ: ರಾಹುಲ್ ಗಾಂಧಿ ಮಾರ್ಮಿಕ ನುಡಿ!

07/03/2026 7:42 AM

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM

ಭಾರತಕ್ಕೆ ಎಷ್ಟು ತೈಲ ರಫ್ತು? ಮಾಹಿತಿ ನೀಡಲು ರಷ್ಯಾ ನಿರಾಕರಣೆ: ‘ನಮ್ಮ ಏಳಿಗೆ ಸಹಿಸದವರು ತುಂಬಾ ಜನರಿದ್ದಾರೆ’ ಎಂದ ಕ್ರೆಮ್ಲಿನ್!

07/03/2026 7:32 AM
State News
KARNATAKA

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

By kannadanewsnow0907/03/2026 7:55 AM KARNATAKA 1 Min Read

ಬೆಂಗಳೂರು: ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳ ಸ್ಥಳಗಳಲ್ಲಿ ಅಪಘಾತದಿಂದ ಮೃತಪಟ್ಟರೆ…

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM

ಪೆಟ್ರೋಲ್-ಡೀಸೆಲ್ ಖಾಲಿಯಾಗುತ್ತಿದೆಯೇ? ಪೆಟ್ರೋಲ್ ಬಂಕ್‌ ಗೆ ಹೋಗುವ ಮುನ್ನ ಈ ಸುದ್ದಿ ಓದಿ !

07/03/2026 7:26 AM

ALERT : ಬೆಳಗಿನ ಉಪಾಹಾರಕ್ಕೆ ಟೀ-ಬಿಸ್ಕೇಟ್ ತಿನ್ನುವವರೇ ಎಚ್ಚರ : ಇದು ಕರುಳಿನ ಆರೋಗ್ಯಕ್ಕೆ ಕುತ್ತು !

07/03/2026 7:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.