ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ನಡೆಸುತ್ತಿದ್ದು ಈ ವೇಳೆ ಸರ್ವರ್ ಸಮಸ್ಯೆ ಹಾಗೂ ಮೊಬೈಲ್ ನಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದರು. ಡಿಸಿಗಳು ಹಾಗು ಸಿಇಒಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ್ದೇನೆ. ಸಮೀಕ್ಷೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ನಿವಾರಣೆ ಮಾಡಬೇಕು ವಿಡಿಯೋ ಸಂವಾದ್ದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಇದುವರೆಗೆ ಶೇಕಡ 4 ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ. ಸಮೀಕ್ಷೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳಲು ಸೂಚನೆ ಕೊಟ್ಟಿದ್ದೇನೆ ಹಿಂದಿನ ಸರ್ವೆ ಗೌರವ ಧನ ಬಿಡುಗಡೆ ಮಾಡಿದ್ದೇವೆ ಬೆಂಗಳೂರು ಸೇರಿ ಎಲ್ಲಾ ಮನೆಗಳಲ್ಲೂ ಸಮೀಕ್ಷೆ ಮಾಡಬೇಕು. ಇನ್ನುಳಿದ ದಿನಗಳಲ್ಲಿ ಸಮೀಕ್ಷೆಯ ಕಾರ್ಯ ಕವರ್ ಮಾಡಬೇಕು ಪ್ರತಿದಿನ ಶೇಕಡ 10 ರಷ್ಟು ಸಮೀಕ್ಷೆ ಆಗಲೇಬೇಕು ನಾವು ಮಾಡುತ್ತೇವೆ ಎಂದು ಎಲ್ಲಾ ಜಿಲ್ಲಾಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಶಿಕ್ಷಕರ ಕೆಲವು ತಪ್ಪು ಕಲ್ಪನೆಗಳಿಂದ ಸಮೀಕ್ಷೆಗೆ ಸಮಸ್ಯೆ ಆಗಿತ್ತು. ಈಗ ಎಲ್ಲರೂ ಕೂಡ ಒಪ್ಪಿಕೊಂಡು ಸಮೀಕ್ಷೆ ಕೆಲಸ ಶುರು ಮಾಡಿದ್ದಾರೆ ಎಂದರು.
ಕಳೆದ ನಾಲ್ಕು ದಿನಗಳಿಂದ ಸರ್ವೆ ಕಾರ್ಯ ಕುಂಠಿತವಾಗಿತ್ತು. ಆದರೆ ಇಂದಿನಿಂದ ಸರ್ವೆ ಕೆಲಸ ಚುರುಕಾಗುತ್ತಿದೆ ಡಿಸಿಗಳು ಹೇಳುವ ಪ್ರಕಾರ 90% ತಾಂತ್ರಿಕ ಸಮಸ್ಯೆ ಪರಿಹಾರವಾಗಿದೆ. ಏನೇನು ತೊಡಕು ಇದ್ದಾವೆ ಅದನ್ನೆಲ್ಲ ನಿವಾರಿಸುವಂತೆ ಸೂಚಿಸಿದ್ದೇನೆ. ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವಿಚಾರವಾಗಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ ಅವರಿಗೆ ಸಮೀಕ್ಷೆ ಕಾರ್ಯ ಮುಗಿಸಲು ತೀರ್ಮಾನಿಸಲಾಗಿದೆ ಎಂದುಳಿದ ವರ್ಗಗಳ ಆಯೋಗ ಕೂಡ ಅದೇ ತೀರ್ಮಾನ ಮಾಡಿತ್ತು ಆದರೆ ಕಳೆದ ನಾಲ್ಕು ದಿನಗಳಿಂದ ಸಮೀಕ್ಷೆ ಸರಿಯಾಗಿ ನಡೆದಿಲ್ಲ.
ಪ್ರತಿದಿನ ಶೇಕಡ 10ರಷ್ಟು ಸಮೀಕ್ಷೆ ಆಗಲೇಬೇಕು. ಕಳೆದ ನಾಲ್ಕು ದಿನದಿಂದ ಸರ್ವೆ ಕಾರ್ಯ ಕುಂಠಿತವಾಗಿತ್ತು ಆದರೆ ಇಂದಿನಿಂದ ಸರ್ವೆ ಕೆಲಸ ಚುರಕಾಗಿ ಇದೆ ಜಿಲ್ಲಾಧಿಕಾರಿಗಳು ಹೇಳುವ ಪ್ರಕಾರ 96 ತಾಂತ್ರಿಕ ಸಮಸ್ಯೆ ಪರಿಹಾರವಾಗಿದೆ ಉಳಿದಿರುವ ಸಮಸ್ಯೆ ಪರಿಹಾರ ಆಗುತ್ತದೆ ಇಂದೇ ಎಲ್ಲಾ ಸಮಸ್ಯೆ ಪರಿಹಾರ ಆಗುತ್ತದೆ ನಾನು ಕಮಿಷನರ್ ಅವರಿಗೂ ಹೇಳಿದ್ದೇನೆ ಕಾರ್ಯದರ್ಶಿಗು ಹೇಳಿದ್ದೇನೆ ಏನೇನು ಸಮಸ್ಯೆಗಳು ಇವೆಯೋ ಅದನ್ನೆಲ್ಲ ನಿವಾರಣೆ ಮಾಡಬೇಕು ಯಾರು ಕೂಡ ಸಂಶಯ ಪಟ್ಟುಕೊಳ್ಳುವ ಅಗತ್ಯ ಇಲ್ಲ ಎಂದು ತಿಳಿಸಿದರು.