Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಭಾರತದಲ್ಲಿ `ಮಹಿಳೆ’ಯರಿಗೆ ಅತ್ಯಂತ ಸುರಕ್ಷಿತ ಟಾಪ್-10 ನಗರಗಳ ಪಟ್ಟಿ ಪ್ರಕಟ : ಬೆಂಗಳೂರು ಸಿಟಿ ನಂ.1

08/01/2026 10:43 AM

BREAKING : ಕೋಲಾರದಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿ : ಓರ್ವ ಯುವಕ ಸಾವು, ನಾಲ್ವರಿಗೆ ಗಂಭೀರ ಗಾಯ!

08/01/2026 10:35 AM

BIG NEWS : ಮತ್ತಷ್ಟು ವೇಗ ಪಡೆದುಕೊಂಡ ಭಾರತದ ರಸ್ತೆ ನಿರ್ಮಾಣ : ` NHAI’ 24 ಗಂಟೆಗಳಲ್ಲಿ ಎರಡು ಗಿನ್ನೆಸ್ ವಿಶ್ವ ದಾಖಲೆ | WATCH VIDEO

08/01/2026 10:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಾವಿರ ಗುಂಗಲಿ’ ಒಲವಿನ ಸವಾರಿ ಹೊರಟ ‘ಬೃಂದಾ ಆಚಾರ್ಯ’!
FILM

‘ಸಾವಿರ ಗುಂಗಲಿ’ ಒಲವಿನ ಸವಾರಿ ಹೊರಟ ‘ಬೃಂದಾ ಆಚಾರ್ಯ’!

By kannadanewsnow0912/05/2024 8:14 PM

ಕೆಎನ್ಎನ್ ಸಿನಿಮಾ ಡೆಸ್ಕ್. ನಿಂತ ನಿಲುವಿನಲ್ಲೇ ಆವರಿಸಿಕೊಳ್ಳಬಲ್ಲ ಹಾಡೊಂದಕ್ಕಾಗಿ ಅನುಕ್ಷಣವೂ ಹಾತೊರೆಯುವ ದೊಡ್ಡದೊಂದು ಸಂಗೀತ ಪ್ರೇಮಿಗಳ ದಂಡು ನಮ್ಮ ನಡುವಲ್ಲಿದೆ. ಯಾವ ಸುಳಿವೂ ಕೊಡದೆ ಚೆಂದದ್ದೊಂದು ಹಾಡು ಅಚಾನಕ್ಕಾಗಿ ಕಿವಿ ಸೋಕಿದರೆ ಅವರಿಗೆಲ್ಲ ಅಕ್ಷರಶಃ ರೋಮಾಂಚನ. ಬೃಂದಾ ಆಚಾರ್ಯ ಮತ್ತು ಭರತ್ ಬೋಪಣ್ಣ ನಟಿಸಿರುವ ಆಲ್ಬಂ ಸಾಂಗ್ ಇದೀಗ ಅಂಥಾದ್ದೊಂದು ಅನುಭೂತಿಯನ್ನು ಬೇಷರತ್ತಾಗಿ ಕೊಡಮಾಡಿದೆ. ಸಾಹಿತ್ಯ, ಸಂಗೀತ, ಪರಿಕಲ್ಪನೆ, ನಟನೆ ಸೇರಿದಂತೆ ಎಲ್ಲದರಲ್ಲಿಯೂ ವಿಶೇಷವಾಗಿರುವ `ಸಾವಿರ ಗುಂಗಲ್ಲಿ’ ಆಲ್ಬಂ ಸಾಂಗ್ ಈಗ ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ.

ಇತ್ತೀಚಿನ ದಿನಮಾನದಲ್ಲಿ ಸಿನಿಮಾಗಳಾಚೆಗೆ ಹಾಡುಗಳು ರೂಪುಗೊಳ್ಳೋದೇ ಅಪರೂಪ. ಆಲ್ಬಂ ಸಾಂಗ್ ಅನ್ನೋ ರೋಮಾಂಚಕ ಪರಿಕಲ್ಪನೆ ಅದೇಕೋ ಬರಬರುತ್ತಾ ನೇಪಥ್ಯಕ್ಕೆ ಸರಿದುಬಿಟ್ಟಿದೆ. ಇಂಥಾ ಹೊತ್ತಲ್ಲಿ `ಸಾವಿರ ಗುಂಗಲ್ಲಿ’ ಎಂಬ ಆಲ್ಬಂ ಸಾಂಗ್ ತನ್ನ ನವಿರು ಶೈಲಿಯೊಂದಿಗೆ ಕೇಳುಗರನ್ನೆಲ್ಲ ಸೋಕುತ್ತಿದೆ. ಮತ್ತಷ್ಟು ಮನಸುಗಳನ್ನು ಆವರಿಸಿಕೊಳ್ಳುತ್ತಾ ಮುಂದುವರೆಯುತ್ತಿದೆ. ಅಂದಹಾಗೆ, ಕೃಷ್ಣ ನಂಜುಂಡಯ್ಯನವರ ಪರಿಕಲ್ಪನೆ, ನಿರ್ದೇಶನದಲ್ಲಿ ಮೂಡಿ ಬಂದಿದೆ. ಬೃಂದಾ ಆಚಾರ್ಯ, ಭರತ್ ಬೋಪಣ್ಣ, ಮಯೂರ್ ಸಾಗರ್, ಕೃತಿಕಾ ಗೌಡ, ಮಾನಿನಿ ಪಿ ರಾವ್ ಮುಂತಾದವರು ಸದರಿ ಆಲ್ಬಂ ಹಾಡಿನ ಭಾಗವಾಗಿದ್ದಾರೆ.

ಅದೆಲ್ಲದರಲ್ಲಿ ಒಂದಿಡೀ ಹಾಡಿನ ಪ್ರಧಾನ ಆಕರ್ಷಣೆಯಾಗಿ ಬೃಂದಾ ಆಚಾರ್ಯ ಕಾಣಿಸುತ್ತಾರೆ. ಹಾಡಿನ ನೆರಳಲ್ಲಿ ಕಥೆಯೊಂದು ಸರಿಯುವಂತೆ ಭಾಸವಾಗುವ ಈ ಆಲ್ಬಂ ಸಾಂಗ್, ಕೇಳುಗರನ್ನೆಲ್ಲ ಒಂದೇ ಸಲಕ್ಕೆ ಸೆಳೆಯುವಂತಿದೆ. ವಿಶೇಷವೆಂದರೆ, ಕನ್ನಡ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡುತ್ತಿರುವ ಪ್ರಮೋದ್ ಮರವಂತೆ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಅದು ಪೃಥ್ವಿ ಭಟ್ ಧ್ವನಿಯಲ್ಲಿ ಮೂಡಿ ಬಂದಿದೆ. ಛಾಯಾಗ್ರಹಣ ಸೇರಿದಂತೆ ಎಲ್ಲದರಲ್ಲಿಯೂ ಈ ಹಾಡು ಅದ್ದೂರಿಯಾಗಿ, ಅರ್ಥವತ್ತಾಗಿ ಮೂಡಿ ಬಂದಿದೆ. ಹೆಚ್ಚಿನ ವೀಕ್ಷಣೆ ಪಡೆಯುತ್ತಾ ಮುಂದುವರೆಯುತ್ತಿರುವ ಸದರಿ ಆಲ್ಬಂ ಸಾಂಗಿನ ಸವಾರಿಯೀಗ ಟ್ರೆಂಡಿಂಗಿನತ್ತ ಮುಖ ಮಾಡಿದೆ. ಆ ಮೂಲಕ ಇದರ ಹಿಂದಿರುವ ಕನಸು, ಶ್ರಮ, ಶ್ರದ್ಧೆಗಳೆಲ್ಲವೂ ಸಾರ್ಥಕವಾದಂತಾಗಿದೆ.

ಬೃಂದಾ ಆಚಾರ್ಯ ಇದೀಗ ಹಲವಾರು ಬಿಗ್ ಬಜೆಟ್ ಸಿನಿಮಾಗಳಲ್ಲಿ ನಾಯಕಿಯಾಗಿ ಬ್ಯುಸಿಯಾಗಿದ್ದಾರೆ. ಅದರ ನಡುವೆಯೂ ಇಂಥಾದ್ದೊಂದು ನವಿರು ಹಾಡಿಗೆ ಜೀವ ತುಂಬುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೀರಿಯಲ್ ಜಗತ್ತಿನಿಂದ ಬಂದು, ಇದೀಗ ನಾಯಕನಾಗಿ ನೆಲೆಗಾಣುತ್ತಿರುವ ಭರತ್ ಬೋಪಣ್ಣ ಕೂಡಾ ಅಷ್ಟೇ ಚೆಂದಗೆ ನಟಿಸಿದ್ದಾರೆ. ಜೋಯ್ ಕಾಸ್ಟಾ ಸಂಗೀತ ನಿರ್ದೇಶನ, ಎನ್.ಕೆ ರಾಜ್ ಛಾಯಾಗ್ರಹಣ, ತಮಿಳರಸನ್ ಎಂ. ಸಂಕಲನ, ಅನಿಲ್ ಸಹ ನಿರ್ದೇಶನದೊಂದಿಗೆ ಈ ವೀಡಿಯೋ ಸಾಂಗ್ ಕಳೆಗಟ್ಟಿಕೊಂಡಿದೆ. ದಿನದಿಂದ ದಿನಕ್ಕೆ ಈ ಹಾಡು ಹೆಚ್ಚೆಚ್ಚು ಜನರನ್ನು ತಲುಪಿಕೊಳ್ಳುತ್ತಿದೆ. ಪ್ರಚಾರದ ಭರಾಟೆ ಇಲ್ಲದೆಯೂ ಕೇಳುಗರನ್ನು ವಶವಾಗಿಸಿಕೊಳ್ಳುತ್ತಿದೆ. ಸಂಗೀತದ ಧ್ಯಾನದೊಂದಿಗೆ ಇಂಥಾದ್ದೊಂದು ಸಾಹಸ ಮಾಡಿರುವ ಒಂದಿಡೀ ತಂಡದ ಕಣ್ಣಲ್ಲೀಗ ಖುಷಿಯ ಹೊಳಪು ಮಿರುಗಲಾರಂಭಿಸಿದೆ!

Share. Facebook Twitter LinkedIn WhatsApp Email

Related Posts

…….. All set?? ಅಂತ ಮಾರ್ಮಿಕವಾಗಿ ಟ್ವಿಟ್ ಮಾಡಿದ ಕಿಚ್ಚ ಸುದೀಪ್‌.

22/12/2025 1:05 PM1 Min Read

ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು, ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ ಎಂದ ನಟ ಕಿಚ್ಚ ಸುದೀಪ್

21/12/2025 4:39 PM1 Min Read

ಯೂಟ್ಯೂಬ್ ನಲ್ಲಿ ನವೀನ್ ಸಜ್ಜು ಅವರ ‘ಕೊಣಾನೆ ಸಾಂಗ್’ ಸಖತ್ ಸದ್ದು: ಸೋಷಿಯಲ್ ಮೀಡಿಯಾದಲ್ಲಿ ಪುಲ್ ವೈರಲ್

13/12/2025 8:20 PM1 Min Read
Recent News

BIG NEWS : ಭಾರತದಲ್ಲಿ `ಮಹಿಳೆ’ಯರಿಗೆ ಅತ್ಯಂತ ಸುರಕ್ಷಿತ ಟಾಪ್-10 ನಗರಗಳ ಪಟ್ಟಿ ಪ್ರಕಟ : ಬೆಂಗಳೂರು ಸಿಟಿ ನಂ.1

08/01/2026 10:43 AM

BREAKING : ಕೋಲಾರದಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿ : ಓರ್ವ ಯುವಕ ಸಾವು, ನಾಲ್ವರಿಗೆ ಗಂಭೀರ ಗಾಯ!

08/01/2026 10:35 AM

BIG NEWS : ಮತ್ತಷ್ಟು ವೇಗ ಪಡೆದುಕೊಂಡ ಭಾರತದ ರಸ್ತೆ ನಿರ್ಮಾಣ : ` NHAI’ 24 ಗಂಟೆಗಳಲ್ಲಿ ಎರಡು ಗಿನ್ನೆಸ್ ವಿಶ್ವ ದಾಖಲೆ | WATCH VIDEO

08/01/2026 10:34 AM

ಇಂಡಿಯನ್ ಗ್ಯಾಸ್ ಎಕ್ಸ್ಚೇಂಜ್ ಡಿಸೆಂಬರ್ 2026 ರ ವೇಳೆಗೆ 700 ಕೋಟಿ ರೂ.ಗಳ ಐಪಿಒ ಬಿಡುಗಡೆ

08/01/2026 10:27 AM
State News
KARNATAKA

BIG NEWS : ಭಾರತದಲ್ಲಿ `ಮಹಿಳೆ’ಯರಿಗೆ ಅತ್ಯಂತ ಸುರಕ್ಷಿತ ಟಾಪ್-10 ನಗರಗಳ ಪಟ್ಟಿ ಪ್ರಕಟ : ಬೆಂಗಳೂರು ಸಿಟಿ ನಂ.1

By kannadanewsnow5708/01/2026 10:43 AM KARNATAKA 2 Mins Read

ಬೆಂಗಳೂರು : ಮಹಿಳೆಯರಿಗೆ ಸುರಕ್ಷಿತ ಮತ್ತು ಉತ್ತಮ ನಗರ ಯಾವುದು? ಈ ಪ್ರಶ್ನೆಗೆ ಉತ್ತರವನ್ನು ಅವತಾರ್ ಗ್ರೂಪ್‌ನ ಇತ್ತೀಚಿನ ವರದಿಯಾದ…

BREAKING : ಕೋಲಾರದಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿ : ಓರ್ವ ಯುವಕ ಸಾವು, ನಾಲ್ವರಿಗೆ ಗಂಭೀರ ಗಾಯ!

08/01/2026 10:35 AM

ಮೈಸೂರು : ಪ್ರೀತ್ಸೆ ಪ್ರೀತ್ಸೆ ಅಂತ ಬೆನ್ನು ಬಿದ್ದ ಯುವಕ : ಕಿರುಕುಳಕ್ಕೆ ಬೇಸತ್ತು ಅಪ್ರಾಪ್ತೆ ಬಾಲಕಿ ಆತ್ಮಹತ್ಯೆಗೆ ಶರಣು!

08/01/2026 10:23 AM

BREAKING : ಶಿವಮೊಗ್ಗದಲ್ಲಿ ಪೊಲೀಸ್ ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ!

08/01/2026 10:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.