Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆಗೆ ಕಠಿಣ ಕಾನೂನು : ವಿಧಾನಸಭೆಯಲ್ಲಿ ‘ಇವ ನಮ್ಮವ ಇವ ನಮ್ಮವ’ ಬಿಲ್ ಮಂಡನೆ

18/03/2026 12:24 PM

Ugadi 2026 : ಯುಗಾದಿ ಹಬ್ಬದ ದಿನ ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಸಂಪೂರ್ಣ ಮಾಹಿತಿ

18/03/2026 12:19 PM

ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ: ರಾಜಮೌಳಿ ತಂದೆ, ಸಂಸದ ವಿಜಯೇಂದ್ರ ಪ್ರಸಾದ್ ವಿರುದ್ಧ ದಲಿತ ಸಂಘಟನೆಗಳ ಆಕ್ರೋಶ

18/03/2026 12:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಾವಿರ ಗುಂಗಲಿ’ ಒಲವಿನ ಸವಾರಿ ಹೊರಟ ‘ಬೃಂದಾ ಆಚಾರ್ಯ’!
FILM

‘ಸಾವಿರ ಗುಂಗಲಿ’ ಒಲವಿನ ಸವಾರಿ ಹೊರಟ ‘ಬೃಂದಾ ಆಚಾರ್ಯ’!

By kannadanewsnow0912/05/2024 8:14 PM

ಕೆಎನ್ಎನ್ ಸಿನಿಮಾ ಡೆಸ್ಕ್. ನಿಂತ ನಿಲುವಿನಲ್ಲೇ ಆವರಿಸಿಕೊಳ್ಳಬಲ್ಲ ಹಾಡೊಂದಕ್ಕಾಗಿ ಅನುಕ್ಷಣವೂ ಹಾತೊರೆಯುವ ದೊಡ್ಡದೊಂದು ಸಂಗೀತ ಪ್ರೇಮಿಗಳ ದಂಡು ನಮ್ಮ ನಡುವಲ್ಲಿದೆ. ಯಾವ ಸುಳಿವೂ ಕೊಡದೆ ಚೆಂದದ್ದೊಂದು ಹಾಡು ಅಚಾನಕ್ಕಾಗಿ ಕಿವಿ ಸೋಕಿದರೆ ಅವರಿಗೆಲ್ಲ ಅಕ್ಷರಶಃ ರೋಮಾಂಚನ. ಬೃಂದಾ ಆಚಾರ್ಯ ಮತ್ತು ಭರತ್ ಬೋಪಣ್ಣ ನಟಿಸಿರುವ ಆಲ್ಬಂ ಸಾಂಗ್ ಇದೀಗ ಅಂಥಾದ್ದೊಂದು ಅನುಭೂತಿಯನ್ನು ಬೇಷರತ್ತಾಗಿ ಕೊಡಮಾಡಿದೆ. ಸಾಹಿತ್ಯ, ಸಂಗೀತ, ಪರಿಕಲ್ಪನೆ, ನಟನೆ ಸೇರಿದಂತೆ ಎಲ್ಲದರಲ್ಲಿಯೂ ವಿಶೇಷವಾಗಿರುವ `ಸಾವಿರ ಗುಂಗಲ್ಲಿ’ ಆಲ್ಬಂ ಸಾಂಗ್ ಈಗ ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ.

ಇತ್ತೀಚಿನ ದಿನಮಾನದಲ್ಲಿ ಸಿನಿಮಾಗಳಾಚೆಗೆ ಹಾಡುಗಳು ರೂಪುಗೊಳ್ಳೋದೇ ಅಪರೂಪ. ಆಲ್ಬಂ ಸಾಂಗ್ ಅನ್ನೋ ರೋಮಾಂಚಕ ಪರಿಕಲ್ಪನೆ ಅದೇಕೋ ಬರಬರುತ್ತಾ ನೇಪಥ್ಯಕ್ಕೆ ಸರಿದುಬಿಟ್ಟಿದೆ. ಇಂಥಾ ಹೊತ್ತಲ್ಲಿ `ಸಾವಿರ ಗುಂಗಲ್ಲಿ’ ಎಂಬ ಆಲ್ಬಂ ಸಾಂಗ್ ತನ್ನ ನವಿರು ಶೈಲಿಯೊಂದಿಗೆ ಕೇಳುಗರನ್ನೆಲ್ಲ ಸೋಕುತ್ತಿದೆ. ಮತ್ತಷ್ಟು ಮನಸುಗಳನ್ನು ಆವರಿಸಿಕೊಳ್ಳುತ್ತಾ ಮುಂದುವರೆಯುತ್ತಿದೆ. ಅಂದಹಾಗೆ, ಕೃಷ್ಣ ನಂಜುಂಡಯ್ಯನವರ ಪರಿಕಲ್ಪನೆ, ನಿರ್ದೇಶನದಲ್ಲಿ ಮೂಡಿ ಬಂದಿದೆ. ಬೃಂದಾ ಆಚಾರ್ಯ, ಭರತ್ ಬೋಪಣ್ಣ, ಮಯೂರ್ ಸಾಗರ್, ಕೃತಿಕಾ ಗೌಡ, ಮಾನಿನಿ ಪಿ ರಾವ್ ಮುಂತಾದವರು ಸದರಿ ಆಲ್ಬಂ ಹಾಡಿನ ಭಾಗವಾಗಿದ್ದಾರೆ.

ಅದೆಲ್ಲದರಲ್ಲಿ ಒಂದಿಡೀ ಹಾಡಿನ ಪ್ರಧಾನ ಆಕರ್ಷಣೆಯಾಗಿ ಬೃಂದಾ ಆಚಾರ್ಯ ಕಾಣಿಸುತ್ತಾರೆ. ಹಾಡಿನ ನೆರಳಲ್ಲಿ ಕಥೆಯೊಂದು ಸರಿಯುವಂತೆ ಭಾಸವಾಗುವ ಈ ಆಲ್ಬಂ ಸಾಂಗ್, ಕೇಳುಗರನ್ನೆಲ್ಲ ಒಂದೇ ಸಲಕ್ಕೆ ಸೆಳೆಯುವಂತಿದೆ. ವಿಶೇಷವೆಂದರೆ, ಕನ್ನಡ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡುತ್ತಿರುವ ಪ್ರಮೋದ್ ಮರವಂತೆ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಅದು ಪೃಥ್ವಿ ಭಟ್ ಧ್ವನಿಯಲ್ಲಿ ಮೂಡಿ ಬಂದಿದೆ. ಛಾಯಾಗ್ರಹಣ ಸೇರಿದಂತೆ ಎಲ್ಲದರಲ್ಲಿಯೂ ಈ ಹಾಡು ಅದ್ದೂರಿಯಾಗಿ, ಅರ್ಥವತ್ತಾಗಿ ಮೂಡಿ ಬಂದಿದೆ. ಹೆಚ್ಚಿನ ವೀಕ್ಷಣೆ ಪಡೆಯುತ್ತಾ ಮುಂದುವರೆಯುತ್ತಿರುವ ಸದರಿ ಆಲ್ಬಂ ಸಾಂಗಿನ ಸವಾರಿಯೀಗ ಟ್ರೆಂಡಿಂಗಿನತ್ತ ಮುಖ ಮಾಡಿದೆ. ಆ ಮೂಲಕ ಇದರ ಹಿಂದಿರುವ ಕನಸು, ಶ್ರಮ, ಶ್ರದ್ಧೆಗಳೆಲ್ಲವೂ ಸಾರ್ಥಕವಾದಂತಾಗಿದೆ.

ಬೃಂದಾ ಆಚಾರ್ಯ ಇದೀಗ ಹಲವಾರು ಬಿಗ್ ಬಜೆಟ್ ಸಿನಿಮಾಗಳಲ್ಲಿ ನಾಯಕಿಯಾಗಿ ಬ್ಯುಸಿಯಾಗಿದ್ದಾರೆ. ಅದರ ನಡುವೆಯೂ ಇಂಥಾದ್ದೊಂದು ನವಿರು ಹಾಡಿಗೆ ಜೀವ ತುಂಬುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೀರಿಯಲ್ ಜಗತ್ತಿನಿಂದ ಬಂದು, ಇದೀಗ ನಾಯಕನಾಗಿ ನೆಲೆಗಾಣುತ್ತಿರುವ ಭರತ್ ಬೋಪಣ್ಣ ಕೂಡಾ ಅಷ್ಟೇ ಚೆಂದಗೆ ನಟಿಸಿದ್ದಾರೆ. ಜೋಯ್ ಕಾಸ್ಟಾ ಸಂಗೀತ ನಿರ್ದೇಶನ, ಎನ್.ಕೆ ರಾಜ್ ಛಾಯಾಗ್ರಹಣ, ತಮಿಳರಸನ್ ಎಂ. ಸಂಕಲನ, ಅನಿಲ್ ಸಹ ನಿರ್ದೇಶನದೊಂದಿಗೆ ಈ ವೀಡಿಯೋ ಸಾಂಗ್ ಕಳೆಗಟ್ಟಿಕೊಂಡಿದೆ. ದಿನದಿಂದ ದಿನಕ್ಕೆ ಈ ಹಾಡು ಹೆಚ್ಚೆಚ್ಚು ಜನರನ್ನು ತಲುಪಿಕೊಳ್ಳುತ್ತಿದೆ. ಪ್ರಚಾರದ ಭರಾಟೆ ಇಲ್ಲದೆಯೂ ಕೇಳುಗರನ್ನು ವಶವಾಗಿಸಿಕೊಳ್ಳುತ್ತಿದೆ. ಸಂಗೀತದ ಧ್ಯಾನದೊಂದಿಗೆ ಇಂಥಾದ್ದೊಂದು ಸಾಹಸ ಮಾಡಿರುವ ಒಂದಿಡೀ ತಂಡದ ಕಣ್ಣಲ್ಲೀಗ ಖುಷಿಯ ಹೊಳಪು ಮಿರುಗಲಾರಂಭಿಸಿದೆ!

Share. Facebook Twitter LinkedIn WhatsApp Email

Related Posts

BREAKING : ಪ್ರತಿಷ್ಠಿತ 2026ರ `ಆಸ್ಕರ್ ಪ್ರಶಸ್ತಿ’ ಪ್ರಕಟ : `ಮೈಕೆಲ್ ಬಿ ಜೋರ್ಡಾನ್- ಜೆಸ್ಸಿ ಬಕ್ಲಿ’ಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ |Oscars 2026

16/03/2026 8:08 AM2 Mins Read

BREAKING : ಪ್ರತಿಷ್ಠಿತ 2026ರ `ಆಸ್ಕರ್ ಪ್ರಶಸ್ತಿ’ ಪ್ರಕಟ : ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ |Oscars 2026

16/03/2026 6:54 AM1 Min Read

ಫೆ.26ಕ್ಕೆ ನಟಿ ರಶ್ಮಿಕಾ ಮಂದಣ್ಣ-ನಟ ವಿಜಯ್ ದೇವರಕೊಂಡ ಮದುವೆ? ಆಮಂತ್ರಣ ಪತ್ರಿಕೆ ವೈರಲ್ | Rashmika Mandanna

16/02/2026 3:57 PM2 Mins Read
Recent News

BREAKING : ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆಗೆ ಕಠಿಣ ಕಾನೂನು : ವಿಧಾನಸಭೆಯಲ್ಲಿ ‘ಇವ ನಮ್ಮವ ಇವ ನಮ್ಮವ’ ಬಿಲ್ ಮಂಡನೆ

18/03/2026 12:24 PM

Ugadi 2026 : ಯುಗಾದಿ ಹಬ್ಬದ ದಿನ ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಸಂಪೂರ್ಣ ಮಾಹಿತಿ

18/03/2026 12:19 PM

ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ: ರಾಜಮೌಳಿ ತಂದೆ, ಸಂಸದ ವಿಜಯೇಂದ್ರ ಪ್ರಸಾದ್ ವಿರುದ್ಧ ದಲಿತ ಸಂಘಟನೆಗಳ ಆಕ್ರೋಶ

18/03/2026 12:14 PM

ವಿದ್ಯಾರ್ಥಿಗಳೇ ಗಮನಿಸಿ : `SSLC,PUC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

18/03/2026 12:02 PM
State News
KARNATAKA

BREAKING : ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆಗೆ ಕಠಿಣ ಕಾನೂನು : ವಿಧಾನಸಭೆಯಲ್ಲಿ ‘ಇವ ನಮ್ಮವ ಇವ ನಮ್ಮವ’ ಬಿಲ್ ಮಂಡನೆ

By kannadanewsnow0518/03/2026 12:24 PM KARNATAKA 1 Min Read

ಬೆಂಗಳೂರು : ಕರ್ನಾಟಕದಲ್ಲಿ ಮರ್ಯಾದಾ ಹತ್ಯೆಗಳನ್ನು (Honor Killings) ತಡೆಗಟ್ಟಲು ರಾಜ್ಯ ಸರ್ಕಾರವು “ಇವ ನಮ್ಮವ, ಇವ ನಮ್ಮವ” ಎಂಬ…

Ugadi 2026 : ಯುಗಾದಿ ಹಬ್ಬದ ದಿನ ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಸಂಪೂರ್ಣ ಮಾಹಿತಿ

18/03/2026 12:19 PM

ವಿದ್ಯಾರ್ಥಿಗಳೇ ಗಮನಿಸಿ : `SSLC,PUC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

18/03/2026 12:02 PM

BREAKING : ಪೋಕ್ಸೋ ಕೇಸ್ ನಲ್ಲಿ ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ರಿಲೀಫ್ : ತನಿಖೆಗೆ ತಡೆ ನೀಡಿ ಹೈಕೋರ್ಟ್ ಆದೇಶ

18/03/2026 11:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.