Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ : OCI ಕಾರ್ಡ್ಗಳನ್ನು ರದ್ದುಗೊಳಿಸಲು ನಿಯಮವನ್ನು ಬಿಗಿಗೊಳಿಸಿದ ಗೃಹ ಸಚಿವಾಲಯ

13/08/2025 7:13 AM

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : PWC ಇಂಡಿಯಾದಿಂದ 20,000 ಹೆಚ್ಚುವರಿ ಉದ್ಯೋಗಗಳ ಸೃಷ್ಟಿ | Jobs Alert

13/08/2025 7:05 AM

BREAKING : ಟ್ರಕ್ ಗೆ ಪಿಕಪ್ ವಾಹನ ಡಿಕ್ಕಿಯಾಗಿ ಘೋರ ದುರಂತ : 7 ಮಕ್ಕಳು ಸೇರಿ 10 ಮಂದಿ ಸ್ಥಳದಲ್ಲೇ ಸಾವು.!

13/08/2025 7:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು: ಮುಖ್ಯಮಂತ್ರಿ ಸಿದ್ದರಾಮಯ್ಯ
KARNATAKA

ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು: ಮುಖ್ಯಮಂತ್ರಿ ಸಿದ್ದರಾಮಯ್ಯ

By kannadanewsnow0726/01/2024 12:05 PM

ಬೆಂಗಳೂರು : ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಿ ಎಂದು ಕರೆ ನೀಡಿದರು.

ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದರು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ಕೂಡ ನಾವೆಯೇ. ಕೆಂಪೇಗೌಡ, ರಾಯಣ್ಣ, ಬಸವಣ್ಣ, ಕುವೆಂಪು, ಕನಕದಾಸ, ಮಹಾತ್ಮಗಾಂಧಿ, ವಿವೇಕಾನಂದ ಎಲ್ಲ ಮಹಾತ್ಮರ ಆಶಯಗಳು ಸ್ಪೂರ್ಥಿಯಾಗಲಿ ಎನ್ನುವ ಕಾರಣಕ್ಕೆ ಅವರ ಹೆಸರುಗಳನ್ನು ಇಡಲಾಗುತ್ತದೆ ಎಂದರು.

ಆದರೆ ಇವರ ಆಶಯಗಳು ನಾಶ ಆಗಬೇಕು, ಸಂವಿಧಾನ ಇರಬಾರದು, ಅಸಮಾನತೆ ಮುಂದುವರೆಯಬೇಕು, ಯಾರೋ ದುಡಿದಿದ್ದನ್ನು ತಾವು ಕುಳಿತು ತಿನ್ನಬೇಕು ಎಂದು ಬಯಸುವವರು ಈಗಲೂ ನಮ್ಮ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಅವರ ಬಗ್ಗೆ ತೀವ್ರ ಎಚ್ಚರದಿಂದ ಇರಬೇಕು ಎಂದು ಕರೆ ನೀಡಿದರು.

ನಮ್ಮಲ್ಲಿ ಒಬ್ಬ ರಾಜನನ್ನು ಕಂಡರೆ ಇನ್ನೊಬ್ಬರಿಗೆ ಆಗುತ್ತಿರಲಿಲ್ಲ. ಈ ಒಡಕನ್ನು ಬಳಸಿಕೊಂಡು ಘಜ್ನಿ ಮಹಮದ್ ಮತ್ತು ಬ್ರಿಟಿಷರು, ಫ್ರೆಂಚರು ಮುಂತಾದವರು ದಾಳಿ ಮಾಡಿದರು ಎಂದರು.

ದೇಶದ ಅವಕಾಶಗಳು ಸಮಾಜದ ಎಲ್ಲಾ ವರ್ಗದವರಿಗೆ ಹಂಚಿಕೆ ಆಗಬೇಕು, ಸಂಪತ್ತಿನ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಸವಣ್ಣನವರ ಆಶಯವೂ ಅದೇ ಆಗಿತ್ತು. ಕುವೆಂಪು ಅವರ ಆಶಯವೂ ಆಗಿತ್ತು. ಈ ಎಲ್ಲರ ಆಶಯ ರಾಯಣ್ಣನ ಹೋರಾಟದಲ್ಲೂ ಇತ್ತು ಎಂದು ವಿವರಿಸಿದರು.

ಆದಿ ಚುಂಚನಗಿರಿ ಮಹಾ ಸಂಸ್ಥಾನದ ಧರ್ಮಗುರು ನಿರ್ಮಲಾನಂದ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

British ruled India for 400 years because of our own machinations and conspiracies: Siddaramaiah ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು: ಮುಖ್ಯಮಂತ್ರಿ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

BREAKING : ಚಾಮರಾಜನಗರದಲ್ಲಿ ಮತ್ತೆ 2 ಹುಲಿ ಮರಿಗಳು ಸಾವು.!

13/08/2025 6:45 AM1 Min Read

ರಾಜ್ಯದಲ್ಲಿ `ಆನ್ ಲೈನ್ ಗೇಮಿಂಗ್ ಹಾವಳಿ ತಡೆಗೆ ಮಹತ್ವದ ಕ್ರಮ : ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

13/08/2025 6:38 AM1 Min Read

ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ `ಅರಣ್ಯ ವೀಕ್ಷಕ’ ಹುದ್ದೆಗಳಿಗೆ ನೇಮಕಾತಿ : ಸಚಿವ ಈಶ್ವರ್ ಖಂಡ್ರೆ ಘೋಷಣೆ.! 

13/08/2025 6:36 AM1 Min Read
Recent News

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಯೋಜನೆ’ಯಡಿ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!

13/08/2025 7:15 AM

2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ : OCI ಕಾರ್ಡ್ಗಳನ್ನು ರದ್ದುಗೊಳಿಸಲು ನಿಯಮವನ್ನು ಬಿಗಿಗೊಳಿಸಿದ ಗೃಹ ಸಚಿವಾಲಯ

13/08/2025 7:13 AM

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : PWC ಇಂಡಿಯಾದಿಂದ 20,000 ಹೆಚ್ಚುವರಿ ಉದ್ಯೋಗಗಳ ಸೃಷ್ಟಿ | Jobs Alert

13/08/2025 7:05 AM

BREAKING : ಟ್ರಕ್ ಗೆ ಪಿಕಪ್ ವಾಹನ ಡಿಕ್ಕಿಯಾಗಿ ಘೋರ ದುರಂತ : 7 ಮಕ್ಕಳು ಸೇರಿ 10 ಮಂದಿ ಸ್ಥಳದಲ್ಲೇ ಸಾವು.!

13/08/2025 7:02 AM
State News
KARNATAKA

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಯೋಜನೆ’ಯಡಿ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!

By kannadanewsnow5713/08/2025 7:15 AM KARNATAKA 1 Min Read

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ…

BREAKING : ಚಾಮರಾಜನಗರದಲ್ಲಿ ಮತ್ತೆ 2 ಹುಲಿ ಮರಿಗಳು ಸಾವು.!

13/08/2025 6:45 AM

ರಾಜ್ಯದಲ್ಲಿ `ಆನ್ ಲೈನ್ ಗೇಮಿಂಗ್ ಹಾವಳಿ ತಡೆಗೆ ಮಹತ್ವದ ಕ್ರಮ : ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

13/08/2025 6:38 AM

ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ `ಅರಣ್ಯ ವೀಕ್ಷಕ’ ಹುದ್ದೆಗಳಿಗೆ ನೇಮಕಾತಿ : ಸಚಿವ ಈಶ್ವರ್ ಖಂಡ್ರೆ ಘೋಷಣೆ.! 

13/08/2025 6:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.