Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಭಾರತ ಮೂಲದ ಯುಎಸ್ ಸೈಬರ್ ಏಜೆನ್ಸಿ ಮುಖ್ಯಸ್ಥರು ‘ChatGPT’ಯಲ್ಲಿ ‘ಸೂಕ್ಷ್ಮ ದಾಖಲೆ’ ಹಂಚಿಕೊಂಡಿದ್ದಾರೆ : ವರದಿ

29/01/2026 9:45 PM

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಸಿಎಂ ಸಿದ್ಧರಾಮಯ್ಯ ವಿದ್ಯುಕ್ತ ಚಾಲನೆ

29/01/2026 9:24 PM

BREAKING: ಆನ್ ಲೈನ್ ಬೆಟ್ಟಿಂಗ್ ಕೇಸ್: EDಯಿಂದ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 177.3 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

29/01/2026 9:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BUDGET BREAKING : ರಾಜ್ಯ ಸರ್ಕಾರದಿಂದ `ಅತಿಥಿ ಉಪನ್ಯಾಸಕರಿಗೆ’ ಗುಡ್ ನ್ಯೂಸ್ : ಗೌರವಧನ 2,000 ರೂ. ಹೆಚ್ಚಳ.!
KARNATAKA

BUDGET BREAKING : ರಾಜ್ಯ ಸರ್ಕಾರದಿಂದ `ಅತಿಥಿ ಉಪನ್ಯಾಸಕರಿಗೆ’ ಗುಡ್ ನ್ಯೂಸ್ : ಗೌರವಧನ 2,000 ರೂ. ಹೆಚ್ಚಳ.!

By kannadanewsnow5707/03/2025 11:52 AM

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2024-25 ) ಅನ್ನು ಮಂಡಿಸುತ್ತಿದ್ದು, ಅತಿಥಿ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಗೌರವಧನವನ್ನು 2,000 ರೂ. ಹೆಚ್ಚಳ ಮಾಡಲಾಗುವುದು. ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಗೌರವಧನ 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 700 ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕುವೆಂಪು ಅವರ ಕವನದ ಮೂಲಕ ಬಜೆಟ್ ಮಂಡನೆ ಆರಂಭಿಸಿರುವ ಸಿಎಂ ಸಿದ್ದರಾಮಯ್ಯ ಅವರು, 6 ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು, ಗ್ಯಾರಂಟಿ ಯೋಜನೆಗಳ ಇತರ ಜನಪರ ಯೋಜನೆಗಳನ್ನು ಜಾರಿಗೆ ತರಲಾಗುವುದು. ಈ ಬಾರಿ ಬಜೆಟ್ 4 ಲಕ್ಷ ಕೋಟಿ ರೂ. ಇದೆ. ಕೃಷಿ ಮತ್ತು ಇನ್ನಿತರ ದಾಖಲೀಕರಣ ಸೇರಿದಂತೆ ಗ್ರಾಮೀಣ ಜನರ ಅಭಿವೃದ್ಧಿಗೆ ಶ್ರಮಿಸಲಾಗುವುದು, ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಲಾಗುವುದು, ನಗರಾಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿಗೆ ಅನುದಾನ 7 ಸಾವಿರ ಕೋಟಿಗೆ ಏರಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರಿ ಪ್ರೌಢಶಾಲೆ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ ಮಾಡಲಾಗುವುದು, ಬಿಸಿಯೂಟ ಕಾರ್ಯಕರ್ತರಿಗೆ 1 ಸಾವಿರ ರೂ. ಗೌರವಧನ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ ಮಾಡಲಾಗುವುದು, 100 ಪ್ರಾಥಮಿಕ, 50 ಪ್ರೌಢಶಾಲೆಗಳ ಉನ್ನತೀಕರಣ, 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

1080 ಕೋಟಿ ರೂ.ವೆಚ್ಚದಲ್ಲಿ ವೃಷಭಾವತಿ ವ್ಯಾಲಿ ಯೋಜನೆ ಜಾರಿಗೆ ತರಲಾಗುವುದು. ಮೊದಲ ಹಂತದಲ್ಲಿ 70 ಕೆರೆ ತುಂಬಿಸುವ ಯೋಜನೆ. ಎತ್ತಿನಹೊಳೆಗೆ ಯೋಜನೆಗೆ 553 ಕೋಟಿ ರೂ. ಯೋಜನೆ ಜಾರಿ. ಅಲ್ಪಸಂಖ್ಯಾತರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಜಾರಿ, 2 ಕೋಟಿ ರೂ.ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ಘೋಷಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿರಿಯ ನಾಗರಿಕರಿಗೆ ಅನ್ನ ಸುವಿಧಾ ಯೋಜನೆ ಜಾರಿಗೊಳಿಸಲಾಗುವುದು, ಅನುಗ್ರಹ ಯೋಜನೆಯಡಿ ಜಾನುವಾರುಗಳ ಆಕಸ್ಮಿಕ ಸಾವಿಗೆ ನೀಡುವ ಪರಿಹಾರ ಮೊತ್ತವನ್ನು 15,000 ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರವು ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದ್ದು, ರಾಜ್ಯದಲ್ಲಿ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, 40 ಸಾವಿರ ಕೋಟಿ ಆದಾಯದ ಗುರಿ ಹೊಂದಿದೆ. ಇನ್ನು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಫಲಾನುಭವಿಗಳನ್ನು ಅಕ್ಕ ಕೋ ಅಪರೇಟಿವ್ ಸೊಸೈಟ್ ಅಡಿ ತರಲಾಗುವುದು ಎಂದು ತಿಳಿಸಿದ್ದಾರೆ.

BUDGET BREAKING: Good news for 'guest lecturers' from state government: Honorarium of Rs 2000 Increase!
Share. Facebook Twitter LinkedIn WhatsApp Email

Related Posts

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಸಿಎಂ ಸಿದ್ಧರಾಮಯ್ಯ ವಿದ್ಯುಕ್ತ ಚಾಲನೆ

29/01/2026 9:24 PM2 Mins Read

BREAKING: ಆನ್ ಲೈನ್ ಬೆಟ್ಟಿಂಗ್ ಕೇಸ್: EDಯಿಂದ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 177.3 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

29/01/2026 9:17 PM1 Min Read

ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಯತ್ನಾಳ್ ಗೆ ಕೋರ್ಟ್ ನಿರ್ಬಂಧ

29/01/2026 7:43 PM1 Min Read
Recent News

BREAKING : ಭಾರತ ಮೂಲದ ಯುಎಸ್ ಸೈಬರ್ ಏಜೆನ್ಸಿ ಮುಖ್ಯಸ್ಥರು ‘ChatGPT’ಯಲ್ಲಿ ‘ಸೂಕ್ಷ್ಮ ದಾಖಲೆ’ ಹಂಚಿಕೊಂಡಿದ್ದಾರೆ : ವರದಿ

29/01/2026 9:45 PM

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಸಿಎಂ ಸಿದ್ಧರಾಮಯ್ಯ ವಿದ್ಯುಕ್ತ ಚಾಲನೆ

29/01/2026 9:24 PM

BREAKING: ಆನ್ ಲೈನ್ ಬೆಟ್ಟಿಂಗ್ ಕೇಸ್: EDಯಿಂದ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 177.3 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

29/01/2026 9:17 PM

ಬೊಜ್ಜು ನಿಯಂತ್ರಣಕ್ಕೆ ಸರ್ಕಾರ ಖಡಕ್ ಕ್ರಮ ; ಬೆಳಗ್ಗೆ 6ರಿಂದ ರಾತ್ರಿ 11ರವರೆಗೆ ಈ ‘ಜಾಹೀರಾತು’ ಪ್ರಸಾರ ಮಾಡುವಂತಿಲ್ಲ!

29/01/2026 8:28 PM
State News
KARNATAKA

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಸಿಎಂ ಸಿದ್ಧರಾಮಯ್ಯ ವಿದ್ಯುಕ್ತ ಚಾಲನೆ

By kannadanewsnow0929/01/2026 9:24 PM KARNATAKA 2 Mins Read

ಬೆಂಗಳೂರು :ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದ ಭವ್ಯ…

BREAKING: ಆನ್ ಲೈನ್ ಬೆಟ್ಟಿಂಗ್ ಕೇಸ್: EDಯಿಂದ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 177.3 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

29/01/2026 9:17 PM

ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಯತ್ನಾಳ್ ಗೆ ಕೋರ್ಟ್ ನಿರ್ಬಂಧ

29/01/2026 7:43 PM

NABL ರಾಷ್ಟ್ರೀಯ ಮಾನ್ಯತೆ ಪಡೆದ ಹ್ಯಾಪಿಯೆಸ್ಟ್‌ ಡಯಾಗ್ನೋಸ್ಟಿಕ್ಸ್‌

29/01/2026 6:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.