ಬೆಂಗಳೂರು : ಕಲ್ಯಾಣ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, 7 ಜಿಲ್ಲೆಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ. 7 ಜಿಲ್ಲೆಗಳ ಪ್ರಗತಿಗಾಗಿ ₹11,770 ಕೋಟಿ ಅನುದಾನ ನೀಡಲಾಗಿದೆ ಎಂದು ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಯಾಗದ ಹೊರತು ರಾಜ್ಯದ ಅಭಿವೃದ್ಧಿ ಅಸಾಧ್ಯ. ಈ ಭಾಗದ ಜನರ ತಲಾ ಆದಾಯ ವೃದ್ಧಿಯ ಜೊತೆಗೆ ಶಿಕ್ಷಣ, ಆರೋಗ್ಯ, ಸಾರಿಗೆ, ಮೂಲಸೌಕರ್ಯ ಸುಧಾರಣೆ ಸೇರಿ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಗುರಿಯಾಗಿದೆ ಎಂದು ತಿಳಿಸಿದ್ದಾರೆ.