ಚಿಕ್ಕಬಳ್ಳಾಪುರ : ಭಾರತ್ ಜೋಡೋ ಯಾತ್ರೆಗೆ ತೆರಳುತ್ತಿದ್ದ ಬಸ್ ಅಪಘಾತ

ಚಿಕ್ಕಬಳ್ಳಾಪುರ : ಭಾರತ್  ಜೋಡೋ ಯಾತ್ರೆಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾದ ಘಟನೆ ಗೌರಿಬಿದನೂರು ಮಾರ್ಗದ ಕಣಿವೆಯಲ್ಲಿ ನಡೆದಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ತೆ ಬಸ್ ಗೆ  ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಚಿಕ್ಕಬಳ್ಳಾಪುರದಿಂದ ಚಿತ್ರದುರ್ಗದ ಕಾರ್ಯಕ್ರಮಕ್ಕೆ ಈ ಬಸ್ ತೆರಳುತ್ತಿತ್ತು ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಖಾಸಗಿ ಬಸ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೆರಳುತ್ತಿದ್ದರು ಎನ್ನಲಾಗಿದ್ದು, ಖಾಸಗಿ ಬಸ್ ಮುಂಭಾಗ ಗ್ಲಾಸ್ ಸಂಪೂರ್ಣ ಪುಡಿಯಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. BIGG NEWS : … Continue reading ಚಿಕ್ಕಬಳ್ಳಾಪುರ : ಭಾರತ್ ಜೋಡೋ ಯಾತ್ರೆಗೆ ತೆರಳುತ್ತಿದ್ದ ಬಸ್ ಅಪಘಾತ