ವಿಜಯಪುರ:ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದೆ. ನಿರಂತರವಾಗಿ ವರುಣ ಅಬ್ಬರದಿಂದ ಸೇತುವೆಗಳೆಲ್ಲ ತುಂಬಿ ಹರಿಯುತ್ತಿದೆ. ದೇವರಹಿಪ್ಪರಗಿ ತಾಲೂಕಿನ ಸಾತಿಹಳ ಗ್ರಾಮದ ಸೇತುವೆ ಫುಲ್‌ ಜಲಾವೃತಗೊಂಡಿದೆ. ಈ ವೇಳೆ ಬಸ್‌ ಚಾಲಕನೊಬ್ಬ ತುಂಬಿ ಹರಿಯುತ್ತಿರುವ ಸೇತುವೆ ಮೇಲೆ ಬಸ್‌ ಚಲಾಯಿಸುತ್ತಿದ್ದು, ದುಸ್ಸಾಹಸಕ್ಕೆ ಇಳಿದಿದ್ದಾನೆ.

BIGG NEWS: ʼನನ್ನ ಹೆಂಡ್ತಿ ಜೊತೆ ಮಾತನಾಡಬೇಡʼ ಅಂದಿದ್ದಕ್ಕೆ ಬ್ಯಾಟ್‌ನಿಂದ ಹೊಡೆದು ವ್ಯಕ್ತಿಯ ಕೊಲೆ

 

ಗ್ರಾಮದ ಡೋಣಿ ನದಿಯಲ್ಲಿ ಪ್ರವಾಹ ಉಂಟಾಗಿ ಇಲ್ಲಿನ ಸೇತುವೆ ಮುಳುಗಡೆಯಾಗಿದೆ. ಈ ಸೇತುವೆಯ ಮೇಲೆ ಬಸ್ ಚಲಾಯಿಸಬೇಡ ಎಂದು ಗ್ರಾಮಸ್ಥರು ಹೇಳಿದರೂ ಬಸ್ ಚಾಲಕ ಅದನ್ನು ಲೆಕ್ಕಿಸದೇ ಬಸ್ ಚಲಾಯಿಸಿ ದುಸ್ಸಾಹಸ ಮೆರೆದಿದ್ದಾನೆ. ಒಂದು ಹಂತದಲ್ಲಿ ಬಸ್ ನದಿಗೆ ವಾಲಿದ್ದು,ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಈ ಚಾಲಕನ ವಿರುದ್ಧ ಕ್ರಮಕೈಗೊಳ್ಳುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ.

Share.
Exit mobile version